8:36 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು

25/01/2022, 08:58

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್ದು ಭಸ್ಮವಾಗಿರುವುರಿಂದ ರೈತರಲ್ಲಿ ಆಂತಕ ಮೂಡಿದೆ. ಜ. 14 ರಂದು ರಾಜಪ್ಪನಿಗೆ ಸೇರಿದ 6 ಗಾಡಿ ಶೇಂಗಾ ಬಳ್ಳಿ ಬಣವೆಗೆ ಬೆಂಕಿ ಬಿದ್ದು ಸುಮಾರು 20 ಸಾವಿರ ನಷ್ಟವಾಗಿದೆ. ಜ. 15 ರಂದು ರಾಜಣ್ಣ ಇವರಿಗೆ ಸೇರಿದ 4 ಗಾಡಿ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದುಸುಮಾರು 15 ಸಾವಿರ ರೂ ನಷ್ಟವಾಗಿದೆ. ಜ. 24 ರಂದು ಚನ್ನಬಸಪ್ಪ ಇವರಿಗೆ ಸೇರಿದ 11 ಎಕರೆಯಲ್ಲಿ ಬೆಳೆದ 8 ಟ್ರಾಕ್ಟ್ರರ್ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದು ಸುಮಾರು 60 ಸಾವಿರು ರೂ ನಷ್ಟವಾಗಿದ್ದು ಒಂದೇ ತಿಂಗಳಲ್ಲಿ ಮೂರು ಜನರ ರೈತರ ಬಣವೆಗಳಿಗೆ ಬೆಂಕಿ ಬಿದ್ದು ಬಸ್ಮವಾಗಿದ್ದು ಜಾನುವಾರಿಗೆ ಮೇವಿನ ಕೊರತೆ ಎದುರಾಗಿದ್ದು ಇವುಗಳ ಪಾಲನೆ ಮಾಡುವುದು ಹೇಗೆ ಎಂಬ ಚಿಂತೆ ಒಂದು ಕಡೆಯಾಗಿದ್ದ ಗ್ರಾಮದಲ್ಲೂ ಸಹ ಬೆಂಕಿ ಅವಗಡಗಳಿಂದ ಆತಂಕ ಉಂಟಾಗಿದ್ದು ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಹುಲ್ಲಿನ ಬಣವಗಳಿಗೆ ಬೆಂಕಿ ಹಚ್ಚುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಮೂರು ಪ್ರಕರಣಗಳನ್ನು ಅಗ್ನಿಶಾಮ ದಳದವರು ಬೆಂಕಿ ನಂದಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು