9:57 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಇಂದು ‘ರಾಷ್ಟ್ರೀಯ ಪ್ರವಾಸೋದ್ಯಮ ದಿನ’:ಪ್ರವಾಸ ಅಂದ್ರೆ ಬರೇ ಮೋಜು ಮಸ್ತಿಯೇ? ಅಲ್ಲ, ಶಾಂತಿ ಅಭಿಯಾನವೇ ?

25/01/2022, 09:48

ಪ್ರವಾಸ ಎಂದ ತಕ್ಷಣ ಎಲ್ಲರ ಮೈ ಮನ ಅರಳುವುದು, ಪುಳಕಿತಗೊಳ್ಳುವುದು. ಉಲ್ಲಾಸಭರಿತವಾಗುವುದು. ಪ್ರವಾಸ ಎಂದರೆ ಯಾರಿಗೆ ತಾನೇ  ಇಷ್ಟ ಇಲ್ಲ ಹೇಳಿ..?

ಪ್ರವಾಸಕ್ಕೆ ಹೊರಡುವ ಹತ್ತು ದಿನ ಮೊದಲೇ ಹಲವಾರು ವಿಷಯಗಳು, ಘಟನೆಗಳು, ಕಲ್ಪನೆಗಳು, ಯೋಚನೆಗಳು ಮನದಲ್ಲಿ ಹಾದು ಹೋಗುತ್ತದೆ . ಪ್ರವಾಸಕ್ಕೆ ಹೋಗುವ ಹಿಂದಿನ ದಿನ ನಿದ್ದೆಯೇ ಬಾರದೇ ಯಾವಾಗ ಬೆಳಗಾಗುತ್ತದೆ ಎಂದು ಕಾಯುವ ತವಕ ಎಲ್ಲರಲ್ಲೂ ಕಂಡು ಬರುತ್ತದೆ.

ಕಥೆ ಪುಸ್ತಕ, ಚಿತ್ರಗಳಲ್ಲಿ, ಪಾಠ ಪುಸ್ತಕಗಳಲ್ಲಿ ನೋಡಿದಂತಹ, ಕೇಳಿದಂತಹ ವಿಚಾರಗಳನ್ನು ಸ್ಥಳಗಳನ್ನು ಕಣ್ಣಾರೆ ನೋಡಿ ಅನುಭವಿಸಿದಾಗ ಉಂಟಾಗುವ ಆನಂದ ಹೇಳಲು ಅಸಾಧ್ಯ..

“ದೇಶ ಸುತ್ತಿ ನೋಡು ಕೋಶ ಓದಿ ನೋಡು ” ಎಂಬ ಮಾತಿನಂತೆ ಪುಸ್ತಕ ಓದುವುದರಿಂದ ಸಿಗುವ ಜ್ಞಾನಕ್ಕಿಂತ ಪ್ರವಾಸದಿಂದ ಪ್ರತ್ಯಕ್ಷ ಕಂಡಾಗ ಸಿಗುವ ಅನುಭವ ಇನ್ನೂ ಹೆಚ್ಚು.

ಸಂಘಜೀವಿಯಾದ ಮಾನವನಿಗೆ ತನ್ನ ದಿನನಿತ್ಯದ ಕೆಲಸ, ಜಂಜಾಟದಿಂದ ಸ್ವಲ್ಪಮಟ್ಟಿಗೆ ದೂರವಿದ್ದು ಮನಸ್ಸನ್ನು ಉಲ್ಲಾಸ ಗೊಳಿಸಲು ಪ್ರವಾಸ ಅತಿ ಅಗತ್ಯ ಶಾಲಾ ಮಕ್ಕಳು ನಾಲ್ಕು ಗೋಡೆಯ ನಡುವೆ ಪಡೆಯುವ ಶಿಕ್ಷಣದ ಜೊತೆಗೆ , ಅವರ ಜ್ಞಾನ ಬಲ ಮನೋಬಲವನ್ನು ವೃದ್ಧಿಸಲು, ಕಲಿಕೆಗೆ ಪೂರಕವಾದಂತಹ ವಾತಾವರಣವನ್ನು ಸೃಷ್ಟಿಸಲು ಪ್ರವಾಸ ಅತ್ಯಂತ ಸಹಕಾರಿ ಆಗಿರುತ್ತದೆ.

ಪ್ರವಾಸ ಎಂದರೆ ಕೇವಲ ಸುತ್ತಾಟ ಮೋಜು ಅಲ್ಲ.. ಪ್ರವಾಸದಿಂದ ಮಾನಸಿಕ ನೆಮ್ಮದಿ, ಜ್ಞಾನಾಭಿವೃದ್ಧಿ ಯಾಗುತ್ತದೆ. ಕಲೆ-ಸಂಸ್ಕೃತಿ, ಆಚಾರ-ವಿಚಾರ, ವೈವಿಧ್ಯತೆಗಳನ್ನು ವಿನಿಮಯ ಮಾಡಿಕೊಳ್ಳಲು ಉತ್ತಮ ಮಾರ್ಗ ವೂ ಆಗಿದೆ. ಮಾನಸಿಕ ನೆಮ್ಮದಿ , ಸಹಕಾರ ಮನೋಭಾವನೆ ,ಉಲ್ಲಾಸ ,ಒತ್ತಡ ನಿವಾರಣೆ , ಸಂತೋಷವನ್ನು ಪ್ರವಾಸದ ಅನುಭವ ನೀಡುತ್ತದೆ.. ಸಂಘಟನಾ ಕೌಶಲ ,ಹೊಂದಾಣಿಕೆ, ಧೈರ್ಯ,ಕಲಿಕೆಯಲ್ಲಿ ಆಸಕ್ತಿಯೂ ಪ್ರವಾಸದಿಂದ ಉಂಟಾಗುತ್ತದೆ.

ಭಾರತ ದೇಶವು ಹಲವಾರು ಪ್ರವಾಸಿ ತಾಣಗಳ ತವರೂರಾಗಿದೆ. ಜಲಪಾತಗಳು, ಶಿಲ್ಪಕಲೆ, ಧಾರ್ಮಿಕ-ಸಾಂಸ್ಕೃತಿಕ ಸಿರಿವಂತಿಕೆಗೆ ನೆಲೆಬೀಡಾದ ಅನೇಕ ಸ್ಥಳಗಳು  ಪ್ರವಾಸಿಗರನ್ನು  ಕೈಬೀಸಿ ಕರೆಯುತ್ತಿದೆ..

ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮವೆಂಬ ಸೇವಾ ವಲಯ ಕಾರ್ಯೋನ್ಮುಖವಾಗಿದೆ. ಪ್ರವಾಸೋದ್ಯಮವು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಲವಾರು ಮಂದಿಗೆ ಉದ್ಯೋಗವನ್ನು ಸೃಷ್ಟಿಸಿದೆ.

ಬೇರೆ ಬೇರೆ ಸಂಸ್ಕೃತಿ ಭಾಷೆ ಧರ್ಮಗಳ ಜನರನ್ನು ಒಟ್ಟುಗೂಡಿಸುವ ವೇದಿಕೆಯಾಗಿರುವ ಕಾರಣ ಪ್ರವಾಸೋದ್ಯಮವನ್ನು “ಶಾಂತಿ ಅಭಿಯಾನ” ಎಂದು ಹೇಳಲಾಗುತ್ತದೆ. ಭಾರತದಲ್ಲಿ ವಿವಿಧ ಪ್ರವಾಸೋದ್ಯಮ ಚಟುವಟಿಕೆಗಳ ಬಗ್ಗೆ  ಜನರಿಗೆ ಜಾಗೃತಿ ಮೂಡಿಸುವುದಕ್ಕಾಗಿ ಪ್ರತಿವರ್ಷ ಜನವರಿ 25ನ್ನು  “ರಾಷ್ಟ್ರೀಯ ಪ್ರವಾಸೋದ್ಯಮ ದಿನ”ವನ್ನಾಗಿ ಆಚರಿಸಲಾಗುತ್ತದೆ.

ಇತ್ತೀಚೆಗೆ ಕೊರೋನಾ ದಿಂದಾಗಿ ಜನರು ಪ್ರವಾಸ ಹೋಗುವುದು ಸ್ವಲ್ಪಮಟ್ಟಿಗೆ ಕಡಿಮೆಯಾಗಿರುವ ಕಾರಣ ಪ್ರವಾಸೋದ್ಯಮವೂ ಆರ್ಥಿಕ ಕುಸಿತವನ್ನು ಕಂಡಿರುವುದು ಸತ್ಯ. ಏನೇ ಇರಲಿ ಮಾನವನಿಗೆ ತನ್ನ ದಿನನಿತ್ಯದ ಒತ್ತಡಗಳನ್ನು ದೂರ ಮಾಡಿ ಮನೋಲ್ಲಾಸ, ಹೊಸ ಚೈತನ್ಯವನ್ನು ಮೂಡಿಸಲು ಪ್ರವಾಸವು ಉತ್ತಮವಾದ ಮಾರ್ಗವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು