11:10 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ: ಕಳ್ಳತನ ಮಾಡಬೇಡ ಎಂದು ಬುದ್ದಿಮಾತು ಹೇಳಿದಕ್ಕೆ ಹೇಯ ಕೃತ್ಯ

25/01/2022, 18:21

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಬುದ್ದಿ ಹೇಳಿದ ತಂದೆಯನ್ನೇ ಮಗ ಕೊಲೆ ಮಾಡಿದ ಘಟನೆ ನಡೆದಿದೆ.

ಮಲ್ಲೂರಹಳ್ಳಿ ಗ್ರಾಮದ ಬರಮಸಾಗರ ಕೊಪ್ಲೆಯ ಗುಡ್ಲು ಮಲ್ಲಯ್ಯ(65) ಎಂಬವರು ತನ್ನ ಪುತ್ರ ಲೋಕೇಶ್(35) ಎಂಬಾತನಿಗೆ ಕಳ್ಳತನ, ಜಗಳ ಮಾಡಬೇಡ. ಬರೀ ನಿನ್ನ ಮೇಲೆ ಆರೋಪಗಳು ಬರುತ್ತಿವೆ ಎಂದು ಬುದ್ದಿ ಮಾತು ಹೇಳಿದ್ದರು. ಇದರಿಂದ ಕೋಪಗೊಂಡ ಮಗ ಸೋಮವಾರ ರಾತ್ರಿ 12 ಗಂಟೆ ವೇಳೆಗೆ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ.

ಲೋಕೇಶ್ ಮೇಲೆ ರೈತರ ಎತ್ತುಗಳ ಕಳವು ಪ್ರಕರಣ ಸೇರಿದಂತೆ ಹಲವು ಕಳ್ಳತನ ಪ್ರಕರಣಗಳಿದ್ದು ಗುಂತಕೋಲಮ್ಮನಹಳ್ಳಿ ಗ್ರಾಮದಲ್ಲಿ ರೈತರ ಎತ್ತುಗಳ ಕಳವು ಪ್ರಕರಣದಲ್ಲಿ ಆರೋಪಿ ಲೋಕೇಶ್ ತಪ್ಪಿಸಿಕೊಂಡು ಜಾಮೀನು ಪಡೆದು ಹೊರ ಬಂದಿದ್ದ ಎನ್ನಲಾಗಿದೆ. ಕಳ್ಳತನ ಮಾಡಬೇಡ ಎಂದು ತಂದೆ ಬುದ್ದಿ ಹೇಳಿದ್ದಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಕುಮಾರಸ್ವಾಮಿ, ಡಿವೈಎಸ್ಪಿ ಕೆ.ವಿ.ಶ್ರೀಧರ್ , ವೃತ್ತ ನಿರೀಕ್ಷಕ ರಮಕಾಂತ ಪಿ.ಎಸ್.ಐ ಮಹೇಶ ಲಕ್ಷ್ಮಣ ಹೊಸಪೇಟೆ ಭೇಟಿ  ನೀಡಿ ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಲೋಕೇಶ್ ನನ್ನು ಫೋಲಿಸರು  ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು