9:54 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ, ವಿದೇಶಕ್ಕೆ ತೆರಳುವ ಉದ್ಯೋಗಿಗಳಿಗೆ ಲಸಿಕೆ ನೋಂದಣಿ ಆರಂಭ: ಶಾಸಕ ವೇದವ್ಯಾಸ ಕಾಮತ್

05/06/2021, 19:20

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗಕ್ಕಾಗಿ, ರಜೆಯಲ್ಲಿದ್ದು ವಾಪಸ್ಸು ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ ಅಥವಾ ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ವಿತರಣೆ ಕಾರ್ಯ ನಾಳೆ ನಗರದ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ವತಿಯಿಂದ ಕೆಲ ದಿನಗಳ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ನನಗೆ ಸೈನಿಕರಿಗೆ, ಉದ್ಯೋಗ ಮತ್ತು ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ನೀಡುವ ಕುರಿತು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಂಸದರು ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಅವರೊಂದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಇದಕ್ಕಾಗಿ ಆನ್ ಲೈನ್ http://dk.nic.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಲ್ಲಿ ನೀಡಿರುವ ವಿಭಾಗಗಳಲ್ಲಿ ನೋಂದಾಯಿಸಿಕೊಂಡು ಬೇಕಾಗುವ ದಾಖಲೆಗಳನ್ನು ಭರ್ತಿ ಮಾಡಬೇಕು. ಆನಂತರ ಅರ್ಜಿ ಸಲ್ಲಿಸಿದವರಿಗೆ ದೂರವಾಣಿಯ ಮೂಲಕ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಎಲ್ಲಾ ಚಟುವಟಿಕೆಗಳ ಪೂರ್ಣ ಜವಬ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಾರಾಗಿರುವ ಪ್ರಭಾಕರ್ ಶರ್ಮ ಅವರು ಹೊತ್ತಿದ್ದಾರೆ. ಹಂತ ಹಂತವಾಗಿ ಲಸಿಕೆ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯನ್ನು, ಪ್ರಭಾಕರ್ ಶರ್ಮಾ ಅವರನ್ನು ಅಥವ ರೆಡ್ ಕ್ರಾಸ್‌ ಸಂಸ್ಥೆಯ ಪ್ರಮುಖರಾದ ಶಾಂತರಾಮ್ ಶೆಟ್ಟಿ ಅವರನ್ನು ಸಂಪರ್ಕಿಸಬಹುದು. ಅಗತ್ಯವಿರುವವರು ಕೂಡಲೇ ನೋಂದಾಯಿಸಿಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು