11:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ, ವಿದೇಶಕ್ಕೆ ತೆರಳುವ ಉದ್ಯೋಗಿಗಳಿಗೆ ಲಸಿಕೆ ನೋಂದಣಿ ಆರಂಭ: ಶಾಸಕ ವೇದವ್ಯಾಸ ಕಾಮತ್

05/06/2021, 19:20

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗಕ್ಕಾಗಿ, ರಜೆಯಲ್ಲಿದ್ದು ವಾಪಸ್ಸು ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ ಅಥವಾ ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ವಿತರಣೆ ಕಾರ್ಯ ನಾಳೆ ನಗರದ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ವತಿಯಿಂದ ಕೆಲ ದಿನಗಳ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ನನಗೆ ಸೈನಿಕರಿಗೆ, ಉದ್ಯೋಗ ಮತ್ತು ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ನೀಡುವ ಕುರಿತು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಂಸದರು ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಅವರೊಂದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಇದಕ್ಕಾಗಿ ಆನ್ ಲೈನ್ http://dk.nic.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಲ್ಲಿ ನೀಡಿರುವ ವಿಭಾಗಗಳಲ್ಲಿ ನೋಂದಾಯಿಸಿಕೊಂಡು ಬೇಕಾಗುವ ದಾಖಲೆಗಳನ್ನು ಭರ್ತಿ ಮಾಡಬೇಕು. ಆನಂತರ ಅರ್ಜಿ ಸಲ್ಲಿಸಿದವರಿಗೆ ದೂರವಾಣಿಯ ಮೂಲಕ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಎಲ್ಲಾ ಚಟುವಟಿಕೆಗಳ ಪೂರ್ಣ ಜವಬ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಾರಾಗಿರುವ ಪ್ರಭಾಕರ್ ಶರ್ಮ ಅವರು ಹೊತ್ತಿದ್ದಾರೆ. ಹಂತ ಹಂತವಾಗಿ ಲಸಿಕೆ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯನ್ನು, ಪ್ರಭಾಕರ್ ಶರ್ಮಾ ಅವರನ್ನು ಅಥವ ರೆಡ್ ಕ್ರಾಸ್‌ ಸಂಸ್ಥೆಯ ಪ್ರಮುಖರಾದ ಶಾಂತರಾಮ್ ಶೆಟ್ಟಿ ಅವರನ್ನು ಸಂಪರ್ಕಿಸಬಹುದು. ಅಗತ್ಯವಿರುವವರು ಕೂಡಲೇ ನೋಂದಾಯಿಸಿಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು