12:40 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ

26/01/2022, 17:51

ಮಂಗಳೂರು(reporterkarnataka.com):  ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡ್‌ಗೆ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಬುಧವಾರ ನಡೆಯಿತು.


ನಗರದ ಕಂಕನಾಡಿ ಗರೋಡಿ ಕ್ಷೇತ್ರದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಗೆ ಕ್ಷೇತ್ರದ ಅರ್ಚಕರು ಪೂಜೆ ಸಲ್ಲಿಸುವ ಮೂಲಕ ಸ್ವಾಭಿಮಾನ ನಡಿಗೆಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಉಪಸ್ಥಿತಿಯಲ್ಲಿ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು.



ಜಾಥಾ ಆರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಜನಾರ್ಧನ ಪೂಜಾರಿ ಮಾರ್ಗದರ್ಶನದಲ್ಲಿ ನಡೆಯುವ ಈ ನಡಿಗೆ ಇದು ರಾಜಕೀಯ ಪ್ರೇರಿತವಾದ ಹೋರಾಟ ಅಲ್ಲ ಸ್ವಾಭಿಮಾನದ ನಡಿಗೆ. ಪಕ್ಷ, ಧರ್ಮ, ಜಾತಿ ಬೇಧ ಮರೆತು ಹಳದಿ ಶಾಲಿನ ಗೌರವದೊಂದಿಗೆ ನಡೆಯುತ್ತಿದೆ ಎಂದರು.ಶಾಸಕ ಯು.ಟಿ ಖಾದರ್ ಮತ್ತಿರರು ಭಾಗಿಯಾಗಿದ್ದರು.

ಜಾಥಾದಲ್ಲಿ ಘೋಷಣೆಗಳಿರುವುದಿಲ್ಲ. ಯಾರ ವಿರುದ್ಧವೂ ಧಿಕ್ಕಾರ ಕೂಗಲು ಅವಕಾಶವಿಲ್ಲ. ಭಾಗವಹಿಸುವ ವಾಹನಗಳು ನಾರಾಯಣಗುರುಗಳು ಶಾಂತಿಯ ಸಂಕೇತವಾಗಿ ನೀಡಿರುವ ಹಳದಿ ಪತಾಕೆಯನ್ನು ಹಾಗೂ ಭಾಗವಹಿಸುವ ನಾರಾಯಣ ಗುರುಗಳ ಅನುಯಾಯಿಗಳು ಹಳದಿ ಶಾಲು ಮಾತ್ರ ಧರಿಸಲು ಅವಕಾಶವಿರುತ್ತದೆ ಸಂಘಟಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು