1:55 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್‌ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!!

30/04/2021, 22:47

ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ.
ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು.

ಆದರೆ ನಗರದ ಹಲವು ಕಡೆಗಳಲ್ಲಿ ಅನಗತ್ಯ ತಿರುಗಾಟಗಳು ಹೆಚ್ಚಾಗಿದೆ. ಅಗತ್ಯ ಸೇವೆ ಹೊರತು ಪಡಿಸಿ ಇನ್ಯಾವ ಸೇವೆಗಳಿಗೂ ಅನುಮತಿ ಇಲ್ಲ, ಶಾಲಾ ಕಾಲೇಜು ಖಾಸಗಿ ಕಛೇರಿಗಳು ಬಂದ್ ಮಾಡುವಂತೆ ನಿರ್ಬಂಧವಿದ್ದರೂ., ಜನರು ನಗರಗಳಿಗೆ ಬರುತ್ತಿದ್ದಾರೆ. ಪೋಲಿಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದರೂ ಲಾಕ್ ಡೌನ್‌ನ ಮಹತ್ವ ಜನರಿಗೆ ತಿಳಿದಿಲ್ಲವೇ. ಅಥವಾ ಇಲಾಖೆ ಮೈ ಮರೆತಿದೆಯೋ ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಗಮನಿಸಿ ಜನರೇ ಹಿಡಿ ಶಾಪ ಹಾಕುತ್ತಿದ್ದಾರೆ.

ಜನರೇ ಹೇಳುವಂತೆ ಪೊಲೀಸರು ತಪಾಸಣೆ ನಡೆಸುತ್ತಿಲ್ಲ. ಹಾಗಿದ್ದರೆ 54 ಕಡೆ ಔಟ್ ಪೋಸ್ಟ್ ಯಾತಕ್ಕಾಗಿ ಬರಿ ತೋರಿಕೆಗಾಗಿಯೇ. ಅನಗತ್ಯ ಕಾರುಗಳ ಓಡಾಟ ಜಾಸ್ತಿಯಾಗಿದೆ. ತುರ್ತು ಸೇವೆ ರಹಿತ ವಾಹನಗಳು ಓಡಾಡುತ್ತಲಿವೆ.ಕಾಲೇಜು ಬಂದ್ ಎಂದು ಸರ್ಕಾರವೇ ಘೋಷಿಸಿ ದ ಮೇಲೆ ಕೆಲವು ಕಡೆ ಓಪನ್ ಇದೆ ಗುಮಾನಿ ಹರಡಿದ್ಧು ಆತಂಕಕ್ಕೆ ಕಾರಣವಾಗಿದೆ. ಎಲ್ಲಾ ನಿಯಮಗಳನ್ನು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ಈ ಲಾಕ್‌ಡೌನ್ ಪರಿಣಾಮಕಾರಿಯಾಗುವುದು ಸಾಧ್ಯ ಇದೆಯೇ ? ಇದ್ಯಾವ ಲಾಕ್ ಡೌನ್ ಎಂಬುದು ಜನ ಸಾಮಾನ್ಯರ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು