4:16 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಚಾರ್ಮಾಡಿಯ ಕಾಡಿನಲ್ಲಿ ಬೆಂಕಿ: ನೂರಾರು ಎಕರೆ ಅರಣ್ಯ ಅಗ್ನಿಗಾಹುತಿ; ಜೀವಸಂಕುಲಕ್ಕೆ ಭಾರಿ ಹಾನಿ

26/01/2022, 23:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ಗುಡ್ಡದಲ್ಲಿ ನಡೆದಿದೆ. ಮಳೆಗಾಲದಲ್ಲಿ ಯಥೇಚ್ಛವಾಗಿ ಮಳೆ ಸುರಿದ ಕೊಟ್ಟಿಗೆಹಾರ ಭಾಗದಲ್ಲಿ ಈಗ ಅಷ್ಟೆ ಪ್ರಮಾಣದಲ್ಲಿ ಬಿಸಿಲು ಸುಡುತ್ತಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ ಪ್ರವಾಸಿಗರು ಯಾರೋ ಸಿಗರೇಟ್ ಸೇದಿ ಎಸೆದಿರುವುದರಿಂದ ಬೆಂಕಿ ತಗುಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. 

ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು ಬೆಂಕಿಯನ್ನ ನಂದಿಸಿದ್ದಾರೆ. ರಸ್ತೆಯಿಂದ ಸುಮಾರು ನಾಲ್ಕೈದು ಕಿ.ಮೀ. ದೂರದ ಎತ್ತರಕ್ಕೆ ಬೆಟ್ಟಕ್ಕೆ ದೌಡಾಯಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಲಯ ಮಾರುತ ಗುಡ್ಡವೆಂದರೆ ಸಾವಿರಾರು ಎಕರೆ ವಿಸ್ತಾರವಾದ ಗುಡ್ಡ. ಒಂದು ಗುಡ್ಡದಿಂದ ಮತ್ತೊಂದು ಗುಡ್ಡಕ್ಕೆ ಲಿಂಕ್ ಇದೆ. ಸೂಕ್ತ ಸಮಯದಲ್ಲಿ ಬೆಂಕಿಯನ್ನ ನಂದಿಸದಿದ್ದರೆ ಆಗುವ ಅನಾಹುತ ಭಾರೀ ದೊಡ್ಡದ್ದು. ಅದನ್ನ ನಿಭಾಯಿಸಲು ಕಷ್ಟ ಸಾಧ್ಯ.


ಸಾವಿರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆ ಬಲಿಯಾಗುತ್ತವೆ. ಈಗಲೇ ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ನೂರಾರು ಪ್ರಾಣಿ-ಪಕ್ಷಿಗಳು, ಕೀಟಗಳು ಬೆಂಕಿಯಲ್ಲಿ ಬೆಂದಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಸಾವಿರಾರು ಎಕರೆ ಅರಣ್ಯ ಹಾಗೂ ಜೀವಸಂಕುಲ ಅಪಾಯದಿಂದ ಪಾರಾದಂತಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿಯ ಸಣ್ಣ ಕಿಡಿ ಬಿದ್ದರೂ ಅರಣ್ಯ ಒಂದೇ ಸಮನೆ ಹೊತ್ತಿ ಉರಿಯುತ್ತೆ. ಇದಿನ್ನು ಜನವರಿ, ಮಾರ್ಚ್, ಏಪ್ರಿಲ್ ವೇಳೆಗೆ ಅರಣ್ಯ ಅಧಿಕಾರಿಗಳು ಕಾಡನ್ನ ಕಣ್ಣಲ್ಲಿ ಕಣ್ಣಿಟ್ಟು ಮಕ್ಕಳಂತೆ ಕಾಪಾಡಬೇಕಿದೆ. ಸ್ವಲ್ಪ ಎಚ್ಚರ ತಪ್ಪಿದರೂ ದೊಡ್ಡ ಅನಾಹುತ ಕಟ್ಟಿಟ್ಟ ಬುತ್ತಿ. ಈಗಾಗಲೇ ಈ ವರ್ಷ ಬಿಸಿಲು ಹೆಚ್ಚಿರುತ್ತೆ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಜಿಲ್ಲೆ ಸೇರಿದಂತೆ ರಾಜ್ಯದ ಅರಣ್ಯವನ್ನ ಸೂಕ್ಷ್ಮವಾಗಿ ಕಾಪಾಡಬೇಕಾದ ಅನಿವಾರ್ಯತೆ ಬಹಳಷ್ಟಿದೆ. ಜಿಲ್ಲೆಯ ಅರಣ್ಯ ಇಲಾಖೆ ಕೂಡ ಕಾಡನ್ನ ರಕ್ಷಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಕೂಡ ಬೆಂಕಿ ಬಿದ್ದಿರೋ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಗುಡ್ಡ ಹತ್ತಿ ಸ್ಥಳಕ್ಕೆ ಹೋಗಿ ಬೆಂಕಿ ನಂದಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು