12:56 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆ ಸಿದ್ದಾರ್ಥ ಗೆ  ಮದುವೆ ಮನೆಯಲ್ಲಿ ನುಡಿ ನಮನ 

27/01/2022, 09:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರಿಗೆ ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ನುಡಿನಮನ ಸಲ್ಲಿಸಿದ್ದಾರೆ.


ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ಮಂಗಳವಾರ ಮೆಹಂದಿ ಶಾಸ್ತ್ರ ನಡೆದಿದ್ದು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಿದ್ದಾರ್ಥ  ಅವರ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಹಾಗೂ ನುಡಿನಮನ ವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮದುಮಗ ಸಂತೋಷ್, ಬಡ ಕುಟುಂಬದಿಂದ ಬಂದ ನನಗೆ ಸಿದ್ದಾರ್ಥ ಹೆಗ್ಗಡೆ ಅವರು ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಕೊಟ್ಟ ಕಾರಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯವಾಯಿತು ಎಂದರು. 


ಬಿಜೆಪಿ ಮುಖಂಡರಾದ ಸಂಜಯ ಗೌಡ, ಪರೀಕ್ಷಿತ್ ಗೌಡ ಮುಂತಾದವರು ಆಗಮಿಸಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರಕ್ಕೆ ನುಡಿನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು