11:05 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಶೂನ್ಯದ ಮಾರಮ್ಮ ದೇವರಿಗೆ ಅದ್ದೂರಿಯ ಎತ್ತಿನ ಗೂಡು ಕಾರ್ಯಕ್ರಮ

27/01/2022, 13:13

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ತೋಡ್ಲರಹಟ್ಟಿ ಬಳಿ ದೇವರ ಎತ್ತುಗಳನ್ನು ಮೆರೆಸುವ ಮೂಲಕ ಶ್ರೀ ಶೂನ್ಯದ ಮಾರಮ್ಮ ದೇವರ ಎತ್ತಿನ ಗೂಡು ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಬುಡಕಟ್ಟು ಮ್ಯಾಸನಾಯಕರ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಶೂನ್ಯ ಮಾರಮ್ಮ ದೇವರ ಎತ್ತಿನಗೂಡು ಕಾರ್ಯಕ್ರವು ಮಂಗಳವಾರ ತೋಡ್ಲರಹಟ್ಟಿ ಬಳಿ ದೇವರ ಪದಿಗಳನ್ನು ತಂಗಟೆ, ಪುವಲಿ, ಬಂದರಕಳ್ಳೆಗಳಿಂದ ದೇವರ ಪದಿಗಳ ನಿರ್ಮಾಣ ಮಾಡುವ ಮೂಲಕ ಆರಂಭವಾಗುತ್ತದೆ. ಅಂದು ಸಂಜೆ ನೂರಾರು ಭಕ್ತಾಧಿಗಳು ದೇವರ ಪದಿಗಳ ಬಳಿ ದೇವರ ಎತ್ತುಗಳ ಜೊತೆಯಲ್ಲಿ ವಾಸ್ತವ್ಯ ಮಾಡುತ್ತಾರೆ. ಭಕ್ತಾಧಿಗಳು ತಂದಂತ ರೊಟ್ಟಿಯನ್ನು ಎತ್ತುಗಳಿಗೆ ನೀಡಿ ಭಕ್ತಿಯನ್ನು ಸಮರ್ಪಣೆ ಮಾಡುತ್ತಾರೆ.

ಇನ್ನು ಮಂಗಳಾವರ ರಾತ್ರಿ ಶೂನ್ಯದ ಮಾರಮ್ಮ ದೇವಿಯನ್ನು ಕಿಲಾರಿಗಳು ಕಟ್ಟಿದ ಹುಲ್ಲಿನ ಗುಡಿಯಲ್ಲಿ ಪ್ರತಿಷ್ಠಾಪಿಸಲಾಯಿತು.

 ಇನ್ನು ಬುಧವಾರ ಬೆಳಿಗ್ಗೆಯಿಂದ ಶೂನ್ಯದ ಮಾರಮ್ಮ ದೇವಿ ಗುಡಿಯಲ್ಲಿ ಪ್ರತಿಷ್ಠಾಪಿಸಿದ್ದ ಮಾರಮ್ಮ ಮೂರ್ತಿಗೆ ಭಕ್ತಾಧಿಗಳು ಹೂ ಹಣ್ಣು ಕಾಯಿ ಇಟ್ಟು ಪೂಜೆ ಸಲ್ಲಿಸಲಾಯಿತು.

ನಂತರ ಸೂರ್ಯನು ಸ್ವಲ್ಪ ಇಳಿಮುಖವಾದಗ ಮೇಯಲು ಹೋದ ದೇವರ ಎತ್ತುಗಳನ್ನು ಹೊಡೆದಂದು ದೇವರ ಪದಿಗಳ ಮುಂದೆ ಅಯಾ ಬೆಡಿಗಿನವರು ಎತ್ತುಗಳನ್ನು ಪ್ರತ್ಯೇಕ ಮಾಡಿಕೊಂಡು ಮೂರು ಬಾರಿ ಮರೆಸಿ, ಆಯಾ ದೇವರ ಪದಿಗಗಳ ಹಮುಂದೆ ಭಕ್ತಾಧಿಗಳ ತಮ್ಮ ಮನೆಯ ದೇವರ ಎತ್ತುಗಳಿಗೆ ಮಂಡಕ್ಕಿ ತೂರಿ ಹಾರಕುತ್ತಾರೆ.

ಎತ್ತುಗಳಿಗೆ, ತದನಂತರ ಕಿಲಾರಿಗಳು ತಮ್ಮ ಪದಿಗಳ ಮುಂದೆ ಕರಿ ಕಂಬಳಿ ಹಾಕಿದಾಗ ಭಕ್ತಾದಿಗಳು ಹೂವು, ಹಣ್ಣು, ಕಾಯಿ ಕಾಸು ಇಟ್ಟು ಪೂಜೆ ಸಲ್ಲಿಸುತ್ತಾರೆ.

ದೇವರ ಎತ್ತುಗಳ ಗೂಡಿನ ಸನ್ನಿಧಿಯಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವಿಜೃಂಭಣೆಯಿಂದ ಜಾತ್ರೆ ಆಚರಿಸುತ್ತಾರೆ. ಇತ್ತೀಚೆಗೆ ನಮ್ಮ ಮ್ಯಾಸ ಬೇಡರ ಸಂಪ್ರದಾಯ ನಶಿಸಿ ಹೋಗ್ತಿದೆ. ಅಂತದ್ರಲ್ಲಿ ನಮ್ಮ ಸಮುದಾಯದವರು ಕೆಲವು ಕಡೆ ಈ ರೀತಿಯ ಹಬ್ಬ ಆಚರಣೆಗಳನ್ನು ಮಾಡೋದ್ರಿಂದ ನಮ್ಮ ಮ್ಯಾಸ ನಾಯಕರ ಸಂಪ್ರದಾಯ ಉಳಿಯಲಿದೆ.

ವಿಶೇಷ ಪೂಜೆನಂತರ ದಾಸಯ್ಯರಿಂದ ಮಣೇವು ಕಾರ್ಯಕ್ರಮ ಜರುಗುತ್ತದೆ, ನಂತರ ಶೂನ್ಯದ ಮಾರಮ್ಮ ದೇವಿಯ ಮೂರ್ತಿಯನ್ನು ಸೂರ್ಯ ಉದಯಿಸುವ ಕಡೆ ಸಾಗಿಹಾಕಿದ ನಂತರ ಅನ್ನದಾಸೋಹ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

.

ಇತ್ತೀಚಿನ ಸುದ್ದಿ

ಜಾಹೀರಾತು