7:46 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ ಸರಕಾರಿ ಕಚೇರಿ ಓಪನ್

27/01/2022, 22:47

ಬೆಂಗಳೂರು(reporterkarnataka.com): ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು.

ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸೋದಕ್ಕೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು