3:04 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ ಸರಕಾರಿ ಕಚೇರಿ ಓಪನ್

27/01/2022, 22:47

ಬೆಂಗಳೂರು(reporterkarnataka.com): ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು.

ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸೋದಕ್ಕೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು