6:23 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್‍ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು?

27/01/2022, 23:10

ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್‍ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ್ ಇಂಧನ ಖಾಲಿಯಾಗಿ ಕಕ್ಷೆಯಲ್ಲಿ ಅಸ್ತವ್ಯಸ್ತವಾಗಿ ಸುತ್ತುತ್ತಿದೆ.

ಈಗ ನಾಲ್ಕು ಟನ್ ತೂಕದ ಸೆಕೆಂಡ್‍ಗೆ 2.58 ಕಿ.ಮೀ ವೇಗದಲ್ಲಿ ಸಂಚರಿಸುವ ರಾಕೆಟ್ ಚಂದ್ರನನ್ನು ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಖಗೋಳವಿಜ್ಞಾನಿ ಬಿಲ್ ಗ್ರೇ ಈ ರಾಕೆಟ್ ಪಥವನ್ನು ಟ್ರ್ಯಾಕ್ ಮಾಡುತ್ತಿದ್ದಾರೆ. ರಾಕೆಟ್ ವೀಕ್ಷಿಸುತ್ತಿರುವ ಖಗೋಳಶಾಸ್ತ್ರಜ್ಞರು ಡೇಟಾವನ್ನು ಸಂಗ್ರಹಿಸುತ್ತಿದ್ದು, ಯಾವಾಗ ರಾಕೆಟ್ ಚಂದ್ರನಿಗೆ ಅಪ್ಪಳಿಸಬಹುದೆಂದು ಲೆಕ್ಕಾಚಾರ ಮಾಡುತ್ತಿದ್ದಾರೆ.

ಮಾರ್ಚ್ 4 ರಂದು ಈ ರಾಕೆಟ್ ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿದ್ದರೂ ಚಂದ್ರನ ಯಾವ ಭಾಗಕ್ಕೆ ಅಪ್ಪಳಿಸಬಹುದು ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ಬಹಳ ಕಠಿಣ ವಿಚಾರ ಎಂದು ತಜ್ಞರು ತಿಳಿಸಿದ್ದಾರೆ.

ಯಾವುದೇ ಉದ್ದೇಶವಿಲ್ಲದೇ ಬಾಹ್ಯಾಕಾಶದ ಕಸವೊಂದು ಚಂದ್ರನ ಮೇಲೆ ಅಪ್ಪಳಿಸುತ್ತಿರುವುದು ಇದೇ ಮೊದಲು. ಅಪ್ಪಳಿಸಿದ ನಂತರ ಸೃಷ್ಟಿಯಾಗುವ ಕುಳಿಯ ಬಗ್ಗೆ ತಿಳಿಯುವ ವೈಜ್ಞಾನಿಕ ಕುತೂಹಲ ಹೆಚ್ಚಾಗಿದೆ ಎಂದು ಬಿಲ್ ಗ್ರೇ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು