1:26 PM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್‍ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು?

27/01/2022, 23:10

ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್‍ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ್ ಇಂಧನ ಖಾಲಿಯಾಗಿ ಕಕ್ಷೆಯಲ್ಲಿ ಅಸ್ತವ್ಯಸ್ತವಾಗಿ ಸುತ್ತುತ್ತಿದೆ.

ಈಗ ನಾಲ್ಕು ಟನ್ ತೂಕದ ಸೆಕೆಂಡ್‍ಗೆ 2.58 ಕಿ.ಮೀ ವೇಗದಲ್ಲಿ ಸಂಚರಿಸುವ ರಾಕೆಟ್ ಚಂದ್ರನನ್ನು ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಖಗೋಳವಿಜ್ಞಾನಿ ಬಿಲ್ ಗ್ರೇ ಈ ರಾಕೆಟ್ ಪಥವನ್ನು ಟ್ರ್ಯಾಕ್ ಮಾಡುತ್ತಿದ್ದಾರೆ. ರಾಕೆಟ್ ವೀಕ್ಷಿಸುತ್ತಿರುವ ಖಗೋಳಶಾಸ್ತ್ರಜ್ಞರು ಡೇಟಾವನ್ನು ಸಂಗ್ರಹಿಸುತ್ತಿದ್ದು, ಯಾವಾಗ ರಾಕೆಟ್ ಚಂದ್ರನಿಗೆ ಅಪ್ಪಳಿಸಬಹುದೆಂದು ಲೆಕ್ಕಾಚಾರ ಮಾಡುತ್ತಿದ್ದಾರೆ.

ಮಾರ್ಚ್ 4 ರಂದು ಈ ರಾಕೆಟ್ ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿದ್ದರೂ ಚಂದ್ರನ ಯಾವ ಭಾಗಕ್ಕೆ ಅಪ್ಪಳಿಸಬಹುದು ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ಬಹಳ ಕಠಿಣ ವಿಚಾರ ಎಂದು ತಜ್ಞರು ತಿಳಿಸಿದ್ದಾರೆ.

ಯಾವುದೇ ಉದ್ದೇಶವಿಲ್ಲದೇ ಬಾಹ್ಯಾಕಾಶದ ಕಸವೊಂದು ಚಂದ್ರನ ಮೇಲೆ ಅಪ್ಪಳಿಸುತ್ತಿರುವುದು ಇದೇ ಮೊದಲು. ಅಪ್ಪಳಿಸಿದ ನಂತರ ಸೃಷ್ಟಿಯಾಗುವ ಕುಳಿಯ ಬಗ್ಗೆ ತಿಳಿಯುವ ವೈಜ್ಞಾನಿಕ ಕುತೂಹಲ ಹೆಚ್ಚಾಗಿದೆ ಎಂದು ಬಿಲ್ ಗ್ರೇ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು