11:04 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಜೊಲ್ಲೆ ಉದ್ಯೋಗ ಸಮೂಹದಿಂದ ಕೊರೊನಾ ವಾರಿಯರ್ಸ್ ಗಳಿಗೆ ಕೊರೊನಾ ಕಿಟ್ ವಿತರಣೆ

06/06/2021, 08:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣವನ್ನು ವಿದೇಶಿ ಔಷಧಿಗಿಂತ ಸ್ವದೇಶೀ ಔಷಧಿಗಳ ಮೂಲಕ ಪರಿಣಾಮಕಾರಿಯಾಗಿ ಗುಣಪಡಿಸಲಾಗುತ್ತದೆ. ತಾಲೂಕಿನಲ್ಲಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಜನರಿಗೆ ಕೊರೊನಾ ಪರೀಕ್ಷೆ ಮಾಡುವ ಮೂಲಕ ಕೊರೊನಾವನ್ನು  ತಡೆಗಟ್ಟಲು ಸಹಕರಿಯಾಗಬೇಕು. ಈಗಾಗಲೇ 2ನೇ ಅಲೆಯಲ್ಲಿ ಹಲವಾರು ಜನರಿಗೆ ಆದ ತೊಂದರೆ ಆದದನ್ನು ಗಮನಿಸಿ 3ನೇ ಅಲೆಯ ಮುಂಜಾಗ್ರತ ಕ್ರಮವಾಗಿ ತಾಲೂಕಿನಲ್ಲಿ ಆಕ್ಸಿಜನ್ ಉತ್ಪಾದನಾ ಕೇಂದ್ರ ಹಾಗೂ ಸುಮಾರು 400 ಆಕ್ಸಿಜನ್ ಬೆಡ್ ಹೊಂದಿರುವ ಕೋವಿಡ್ ಕೇರ್ ಸೆಂಟರನ್ನು ಪ್ರತಿ ತಾಲೂಕಿನಲ್ಲಿ ನಿರ್ಮಿಸಲಾಗುವುದು.

ಈಗಾಗಲೇ ತಾಲೂಕಿನಲ್ಲಿ ಕೊರೊನಾ ಹತೋಟಿಗೆ ಬಂದದ್ದು, ಇನ್ನು ಸ್ವಲ್ಪ ದಿನಗಳಲ್ಲಿ  ಪೂರ್ಣ ಪ್ರಮಾಣದಲ್ಲಿ ಇಲ್ಲದಂತಾಗುವುದು. 

ಇದೇ ವೇಳೆಯಲ್ಲಿ ಮಾತನಾಡಿದ ಆರ್ ಎಸ್ ಎಸ್ ಮುಖಂಡ ಅರವಿಂದ್ ದೇಶಪಾಂಡೆ ಅವರು ತಾಲೂಕಿನಲ್ಲಿ ಕೊರೊನಾ  ಹತೋಟಿಗೆ ಬರಲು ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಹೇಶ್ ಕುಮಟಳ್ಳಿ ಅವರ ಪಾತ್ರ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎಂದರು.

 ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಮಾತನಾಡಿ, ಈಗಾಗಲೇ ಫ್ರಂಟ್ಲೈನ್ ವಾರಿಯರ್ ಗಳಾದ ಪತ್ರಕರ್ತರಿಗೂ ಸಹ ವಿಶೇಷ ಪ್ಯಾಕೇಜ್ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಆದಷ್ಟು ಬೇಗ ಪತ್ರಕರ್ತರಿಗೂ ಸಹ ಒಂದು ವಿಶೇಷ ಪ್ಯಾಕೇಜ್ ಕೊಡಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು