11:12 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಆಧ್ಯಾತ್ಮ ಎನ್ನುವ ವಿಷಯ ನೀಡಿದರೆ ಮುಂದಿನ ವರ್ಷ ನಾರಾಯಣ ಗುರುಗಳ ಸ್ತಬ್ಧಚಿತ್ರ : ಸಚಿವ ವಿ.ಸುನೀಲ್ ಕುಮಾರ್

28/01/2022, 13:28

ಮಂಗಳೂರು(ReporterKarnataka.com) ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್‌ಗೆ ಆಧ್ಯಾತ್ಮ ಎಂಬ ವಿಷಯವನ್ನು ಕೊಟ್ಟರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.

ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಮಾಧ್ಯಮದ ಜತೆ ಮಾತನಾಡಿದ ಅವರು,
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರದ ಸಮಿತಿ ಅಮೃತಮಹೋತ್ಸವ ಎಂಬ ವಿಷಯದ ಸ್ತಬ್ದಚಿತ್ರ ಕಳುಹಿಸಲು ಹೇಳಿತ್ತು.

ಮುಂದಿನ ವರ್ಷ ಯಾವ ಆಯಾಮದಲ್ಲಿ ಸ್ತಬ್ಥಚಿತ್ರ ಕಳುಹಿಸಬೇಕು ಎಂಬುವುದನ್ನು ಕೇಂದ್ರ ಸರಕಾರದ ಸಮಿತಿ ತೀರ್ಮಾನಿಸುತ್ತದೆ. ಮುಂದಿನ ವರ್ಷ ಪ್ರವಾಸೋದ್ಯಮ, ಅರಣ್ಯ ಹೀಗೆ ವಿಷಯ ನೀಡಿದರೆ ಅದಕ್ಕೆ ತಕ್ಕುದಾದ ಸ್ತಬ್ಧಚಿತ್ರ ಕಳುಹಿಸುತ್ತೇವೆ. ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ನಾರಾಯಣ ಗುರು ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ಹೇಳಿದರು.

ಈ ಬಾರಿಯ ನಾರಾಯಣ ಗುರು ಟ್ಯಾಬ್ಲೋ ವಿಚಾರವನ್ನು ಕೇರಳ ಸರ್ಕಾರ ರಾಜಕೀಯಗೊಳಿಸಿದೆ. ನಾರಾಯಣ ಗುರುಗಳನ್ನು ಬಿಜೆಪಿ ರಾಜಕಾರಣಕ್ಕೆ ಈ ಹಿಂದೆಯೂ ಬಳಸಿಲ್ಲ.
ಮುಂದೆಯೂ ಬಳಸಲ್ಲ. ಕಾಂಗ್ರೆಸ್‌ ಇದನ್ನು ರಾಜಕೀಯಗೊಳಿಸಿರಬಹುದು. ಅವರ ಆದರ್ಶಗಳನ್ನು ಸರ್ಕಾರದ ಕಾರ್ಯಕ್ರಮಗಳಲ್ಲಿ ಬಳಸುತ್ತೇವೆ.

ಲೇಡಿಹಿಲ್‌ ಸರ್ಕಲ್‌ಗೆ ಶೀಘ್ರ ಕಾನೂನಾತ್ಮಕ ನಾಮಕರಣ
ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಹೆಸರಿಡಬೇಕು ಎನ್ನುವುದು ಬಿಜೆಪಿಯ ಮಹಾನಗರ ಪಾಲಿಕೆಯ ನಿರ್ಣಯ. ಅದು ನಮ್ಮ ಬದ್ಧತೆ. ಇದರಲ್ಲಿ ರಾಜಕಾರಣ ಇಲ್ಲ. ಕಾನೂನು ಬದ್ದವಾಗಿ ಆಗಬೇಕು ಎನ್ನುವುದು ಶಾಸಕ, ಕಾರ್ಪೋರೇಟರ್‌ಗಳ ಅಭಿಪ್ರಾಯ. ಇದು ಅಂತಿಮ ಹಂತದಲ್ಲಿದೆ. ಇದರ ಮೊದಲೇ ಬೋರ್ಡ್ ಹಾಕಿದರೆ ನಮ್ಮ ಆಕ್ಷೇಪ ಏನಿಲ್ಲ. ಅತ್ಯಂತ ಶೀಘ್ರವಾಗಿ ಅಧಿಕೃತವಾಗಿ ನಾಮಕರಣ ಮಾಡುತ್ತೇವೆ ಎಂದರು.

ಈ ವೇಳೆ ಶಾಸಕರದಾದ ವೇದವ್ಯಾಸ್‌ ಕಾಮತ್‌, ಉಮನಾಥ್‌ ಕೋಟ್ಯಾನ್‌, ಡಾ. ಭರತ್‌ ಶೆಟ್ಟಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು