4:42 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಆಧ್ಯಾತ್ಮ ಎನ್ನುವ ವಿಷಯ ನೀಡಿದರೆ ಮುಂದಿನ ವರ್ಷ ನಾರಾಯಣ ಗುರುಗಳ ಸ್ತಬ್ಧಚಿತ್ರ : ಸಚಿವ ವಿ.ಸುನೀಲ್ ಕುಮಾರ್

28/01/2022, 13:28

ಮಂಗಳೂರು(ReporterKarnataka.com) ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್‌ಗೆ ಆಧ್ಯಾತ್ಮ ಎಂಬ ವಿಷಯವನ್ನು ಕೊಟ್ಟರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.

ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಮಾಧ್ಯಮದ ಜತೆ ಮಾತನಾಡಿದ ಅವರು,
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರದ ಸಮಿತಿ ಅಮೃತಮಹೋತ್ಸವ ಎಂಬ ವಿಷಯದ ಸ್ತಬ್ದಚಿತ್ರ ಕಳುಹಿಸಲು ಹೇಳಿತ್ತು.

ಮುಂದಿನ ವರ್ಷ ಯಾವ ಆಯಾಮದಲ್ಲಿ ಸ್ತಬ್ಥಚಿತ್ರ ಕಳುಹಿಸಬೇಕು ಎಂಬುವುದನ್ನು ಕೇಂದ್ರ ಸರಕಾರದ ಸಮಿತಿ ತೀರ್ಮಾನಿಸುತ್ತದೆ. ಮುಂದಿನ ವರ್ಷ ಪ್ರವಾಸೋದ್ಯಮ, ಅರಣ್ಯ ಹೀಗೆ ವಿಷಯ ನೀಡಿದರೆ ಅದಕ್ಕೆ ತಕ್ಕುದಾದ ಸ್ತಬ್ಧಚಿತ್ರ ಕಳುಹಿಸುತ್ತೇವೆ. ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ನಾರಾಯಣ ಗುರು ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ಹೇಳಿದರು.

ಈ ಬಾರಿಯ ನಾರಾಯಣ ಗುರು ಟ್ಯಾಬ್ಲೋ ವಿಚಾರವನ್ನು ಕೇರಳ ಸರ್ಕಾರ ರಾಜಕೀಯಗೊಳಿಸಿದೆ. ನಾರಾಯಣ ಗುರುಗಳನ್ನು ಬಿಜೆಪಿ ರಾಜಕಾರಣಕ್ಕೆ ಈ ಹಿಂದೆಯೂ ಬಳಸಿಲ್ಲ.
ಮುಂದೆಯೂ ಬಳಸಲ್ಲ. ಕಾಂಗ್ರೆಸ್‌ ಇದನ್ನು ರಾಜಕೀಯಗೊಳಿಸಿರಬಹುದು. ಅವರ ಆದರ್ಶಗಳನ್ನು ಸರ್ಕಾರದ ಕಾರ್ಯಕ್ರಮಗಳಲ್ಲಿ ಬಳಸುತ್ತೇವೆ.

ಲೇಡಿಹಿಲ್‌ ಸರ್ಕಲ್‌ಗೆ ಶೀಘ್ರ ಕಾನೂನಾತ್ಮಕ ನಾಮಕರಣ
ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಹೆಸರಿಡಬೇಕು ಎನ್ನುವುದು ಬಿಜೆಪಿಯ ಮಹಾನಗರ ಪಾಲಿಕೆಯ ನಿರ್ಣಯ. ಅದು ನಮ್ಮ ಬದ್ಧತೆ. ಇದರಲ್ಲಿ ರಾಜಕಾರಣ ಇಲ್ಲ. ಕಾನೂನು ಬದ್ದವಾಗಿ ಆಗಬೇಕು ಎನ್ನುವುದು ಶಾಸಕ, ಕಾರ್ಪೋರೇಟರ್‌ಗಳ ಅಭಿಪ್ರಾಯ. ಇದು ಅಂತಿಮ ಹಂತದಲ್ಲಿದೆ. ಇದರ ಮೊದಲೇ ಬೋರ್ಡ್ ಹಾಕಿದರೆ ನಮ್ಮ ಆಕ್ಷೇಪ ಏನಿಲ್ಲ. ಅತ್ಯಂತ ಶೀಘ್ರವಾಗಿ ಅಧಿಕೃತವಾಗಿ ನಾಮಕರಣ ಮಾಡುತ್ತೇವೆ ಎಂದರು.

ಈ ವೇಳೆ ಶಾಸಕರದಾದ ವೇದವ್ಯಾಸ್‌ ಕಾಮತ್‌, ಉಮನಾಥ್‌ ಕೋಟ್ಯಾನ್‌, ಡಾ. ಭರತ್‌ ಶೆಟ್ಟಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು