3:36 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಆಧ್ಯಾತ್ಮ ಎನ್ನುವ ವಿಷಯ ನೀಡಿದರೆ ಮುಂದಿನ ವರ್ಷ ನಾರಾಯಣ ಗುರುಗಳ ಸ್ತಬ್ಧಚಿತ್ರ : ಸಚಿವ ವಿ.ಸುನೀಲ್ ಕುಮಾರ್

28/01/2022, 13:28

ಮಂಗಳೂರು(ReporterKarnataka.com) ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್‌ಗೆ ಆಧ್ಯಾತ್ಮ ಎಂಬ ವಿಷಯವನ್ನು ಕೊಟ್ಟರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.

ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಮಾಧ್ಯಮದ ಜತೆ ಮಾತನಾಡಿದ ಅವರು,
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರದ ಸಮಿತಿ ಅಮೃತಮಹೋತ್ಸವ ಎಂಬ ವಿಷಯದ ಸ್ತಬ್ದಚಿತ್ರ ಕಳುಹಿಸಲು ಹೇಳಿತ್ತು.

ಮುಂದಿನ ವರ್ಷ ಯಾವ ಆಯಾಮದಲ್ಲಿ ಸ್ತಬ್ಥಚಿತ್ರ ಕಳುಹಿಸಬೇಕು ಎಂಬುವುದನ್ನು ಕೇಂದ್ರ ಸರಕಾರದ ಸಮಿತಿ ತೀರ್ಮಾನಿಸುತ್ತದೆ. ಮುಂದಿನ ವರ್ಷ ಪ್ರವಾಸೋದ್ಯಮ, ಅರಣ್ಯ ಹೀಗೆ ವಿಷಯ ನೀಡಿದರೆ ಅದಕ್ಕೆ ತಕ್ಕುದಾದ ಸ್ತಬ್ಧಚಿತ್ರ ಕಳುಹಿಸುತ್ತೇವೆ. ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ನಾರಾಯಣ ಗುರು ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ಹೇಳಿದರು.

ಈ ಬಾರಿಯ ನಾರಾಯಣ ಗುರು ಟ್ಯಾಬ್ಲೋ ವಿಚಾರವನ್ನು ಕೇರಳ ಸರ್ಕಾರ ರಾಜಕೀಯಗೊಳಿಸಿದೆ. ನಾರಾಯಣ ಗುರುಗಳನ್ನು ಬಿಜೆಪಿ ರಾಜಕಾರಣಕ್ಕೆ ಈ ಹಿಂದೆಯೂ ಬಳಸಿಲ್ಲ.
ಮುಂದೆಯೂ ಬಳಸಲ್ಲ. ಕಾಂಗ್ರೆಸ್‌ ಇದನ್ನು ರಾಜಕೀಯಗೊಳಿಸಿರಬಹುದು. ಅವರ ಆದರ್ಶಗಳನ್ನು ಸರ್ಕಾರದ ಕಾರ್ಯಕ್ರಮಗಳಲ್ಲಿ ಬಳಸುತ್ತೇವೆ.

ಲೇಡಿಹಿಲ್‌ ಸರ್ಕಲ್‌ಗೆ ಶೀಘ್ರ ಕಾನೂನಾತ್ಮಕ ನಾಮಕರಣ
ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಹೆಸರಿಡಬೇಕು ಎನ್ನುವುದು ಬಿಜೆಪಿಯ ಮಹಾನಗರ ಪಾಲಿಕೆಯ ನಿರ್ಣಯ. ಅದು ನಮ್ಮ ಬದ್ಧತೆ. ಇದರಲ್ಲಿ ರಾಜಕಾರಣ ಇಲ್ಲ. ಕಾನೂನು ಬದ್ದವಾಗಿ ಆಗಬೇಕು ಎನ್ನುವುದು ಶಾಸಕ, ಕಾರ್ಪೋರೇಟರ್‌ಗಳ ಅಭಿಪ್ರಾಯ. ಇದು ಅಂತಿಮ ಹಂತದಲ್ಲಿದೆ. ಇದರ ಮೊದಲೇ ಬೋರ್ಡ್ ಹಾಕಿದರೆ ನಮ್ಮ ಆಕ್ಷೇಪ ಏನಿಲ್ಲ. ಅತ್ಯಂತ ಶೀಘ್ರವಾಗಿ ಅಧಿಕೃತವಾಗಿ ನಾಮಕರಣ ಮಾಡುತ್ತೇವೆ ಎಂದರು.

ಈ ವೇಳೆ ಶಾಸಕರದಾದ ವೇದವ್ಯಾಸ್‌ ಕಾಮತ್‌, ಉಮನಾಥ್‌ ಕೋಟ್ಯಾನ್‌, ಡಾ. ಭರತ್‌ ಶೆಟ್ಟಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು