9:40 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್: ಮಂಗಳೂರು, ಬೆಂಗಳೂರು ಸೇರಿದಂತೆ 10 ನಗರಗಳಲ್ಲಿ ಅಧಿಕ ಮಾಲಿನ್ಯ; ಲಾಕ್ ಡೌನ್ ನಲ್ಲೂ ಹೆಚ್ಚಳ

28/01/2022, 21:50

ಹೊಸದಿಲ್ಲಿ(reporterkarnataka.com): ಕೊರೊನಾ ಭೀತಿಯ ನಡುವೆಯೂ ದಕ್ಷಿಣ ಭಾರತದ ಮಂಗಳೂರು, ಬೆಂಗಳೂರು ಮತ್ತು ಮೈಸೂರು ಸೇರಿದಂತೆ 10 ನಗರಗಳಲ್ಲಿ ಹೆಚ್ಚಿನ ಮಾಲಿನ್ಯ ಕಂಡು ಬಂದಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್‌ 20ರಿಂದ 2021ರ ನವೆಂಬರ್‌ 20ರ ವರೆಗಿನ ದತ್ತಾಂಶಗಳ ಬಗ್ಗೆ ಅಧ್ಯಯನ ನಡೆಸಿರುವ ಗ್ರೀನ್‌ಪೀಸ್‌ ಇಂಡಿಯಾ ಈ ವರದಿ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಿಗದಿಪಡಿಸಿರುವ ಗುಣಮಟ್ಟಕ್ಕಿಂತಲೂ ಈ ನಗರಗಳಲ್ಲಿ ಹೆಚ್ಚಿನ ಮಾಲಿನ್ಯವಿದೆ ಎಂದು ಗ್ರೀನ್‌ಪೀಸ್‌ ಇಂಡಿಯಾ ವರದಿ ತಿಳಿಸಿದೆ.

ಕೊಯಮತ್ತೂರು, ಬೆಂಗಳೂರು, ಮಂಗಳೂರು ಮತ್ತು ಅಮರಾವತಿಯ ಪಿಎಂ 2.5 ಮಟ್ಟ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಲ್ಲಿ ತಿಳಿಸಿರುವ ಮಟ್ಟಕ್ಕಿಂತ 6ರಿಂದ 7 ಪಟ್ಟು ಹೆಚ್ಚಾಗಿದೆ. ಮೈಸೂರು, ಕೊಚ್ಚಿ, ಚೆನ್ನೈ ಮತ್ತು ಪುದುಚೇರಿಯ ಪಿಎಂ 2.5 ಮಟ್ಟ 4ರಿಂದ 5 ಪಟ್ಟು ಹೆಚ್ಚಿದೆ ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಈ ಮೂಲಕ ವಾಯುಮಾಲಿನ್ಯ ಮಟ್ಟ ಕೇವಲ ಉತ್ತರ ಭಾರತವಷ್ಟೇ ಅಲ್ಲ, ದಕ್ಷಿಣ ಭಾರತದಲ್ಲೂ ಹೆಚ್ಚಾಗಿದೆ ಎಂಬುದನ್ನು ಮನದಟ್ಟು ಮಾಡಿದೆ ಎಂದು “ಇಂಡಿಯನ್‌ ಎಕ್ಸ್‌ಪ್ರಸ್‌’ ಉಲ್ಲೇಖೀಸಿದೆ.

ಲಾಕ್‌ಡೌನ್‌ನಲ್ಲೂ ಹೆಚ್ಚು: ವಿಚಿತ್ರವೆಂದರೆ, ಲಾಕ್‌ಡೌನ್‌ ಘೋಷಣೆ ಮಾಡಿದ್ದ ಅವಧಿಯಲ್ಲೂ 10 ನಗರಗಳಲ್ಲಿ ಪಿಎಂ 2.5 ಮತ್ತು ಪಿಎಂ 10 ವಾರ್ಷಿಕ ಮೌಲ್ಯ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿರುವ ಮಾರ್ಗಸೂಚಿಗಿಂತ ಹೆಚ್ಚಾಗಿದೆ ಎಂದು ಈ ವರದಿ ತಿಳಿಸಿದೆ. ವಿಶಾಖ ಪಟ್ಟಣ, ಹೈದರಾಬಾದ್‌ಗಳಲ್ಲಿ ಮಾಲಿನ್ಯ 6 ಪಟ್ಟು ಹೆಚ್ಚಿದ್ದರೆ ಬೆಂಗಳೂರು, ಮಂಗಳೂರು, ಅಮರಾವತಿ, ಚೆನ್ನೈ, ಕೊಚ್ಚಿಯಲ್ಲಿ 3ರಿಂದ 4 ಪಟ್ಟು ಹೆಚ್ಚಿತ್ತು ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಮೈಸೂರು, ಕೊಯಮತ್ತೂರು, ಪುದುಚೇರಿಯ ಮಾಲಿನ್ಯ ಪ್ರಮಾಣ ಎರಡರಿಂದ ಮೂರು ಪಟ್ಟು ಹೆಚ್ಚಾಗಿತ್ತು ಎಂದಿದೆ.

ಮೊದಲ 10 ಮಲಿನ ನಗರಗಳು: ಬೆಂಗಳೂರು, 2. ಹೈದರಾಬಾದ್‌, ಚೆನ್ನೈ, 4. ಅಮರಾವತಿ,ವಿಶಾಖಪಟ್ಟಣಂ, 6. ಕೊಚ್ಚಿ, ಮಂಗಳೂರು, 8. ಪುದುಚೇರಿ, ಕೊಯಮತ್ತೂರು, 10. ಮೈಸೂರು.

ಮಾಲಿನ್ಯಕ್ಕೆ ಕಾರಣವೇನು? : ಮೂಲ ಸೌಕರ್ಯ ಅಭಿವೃದ್ಧಿ, ಕೈಗಾರಿಕೆಗಳು, ಸಾರಿಗೆ, ಕಸವನ್ನು ಸುಡುವುದು, ನಿರ್ಮಾಣ ಕಾಮಗಾರಿ ಅತಿಯಾದ ಮಾಲಿನ್ಯಕ್ಕೆ ಕಾರಣವಾಗಿವೆ. ಇದರಿಂದ ಅಸ್ತಮಾ, ಹುಟ್ಟುವಾಗ ಮಗುವಿನ ತೂಕ ಕಡಿಮೆ, ಖನ್ನತೆ, ಸ್ಕಿಝೋಫ್ರೀನಿಯಾ, ಸಕ್ಕರೆ ಕಾಯಿಲೆ, ಪಾರ್ಶ್ವವಾಯು, ಶ್ವಾಸಕೋಶದ ಕ್ಯಾನ್ಸರ್‌, ಅವಧಿಗಿಂತ ಮುಂಚೆಯೇ ಮಗು ಹುಟ್ಟುವ ಸಮಸ್ಯೆಗಳು ಕಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು