1:18 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುಣಚ ಸವಾಲು

28/01/2022, 22:01

ಮಂಗಳೂರು(reporterkarnataka.com): ಅಧಿಕಾರ ನಿಮ್ಮಲ್ಲಿದೆ. ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್‌ ಪುಣಚ ಸವಾಲೆಸೆದರು.


ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ. ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ತೆಗೆಸಿ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದ.ಕ ಜಿಲ್ಲಾ ಶಾಖೆ
ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

2013ರ ನಂತರ ಈ ದೇಶ ಒಂದು ಧಾರ್ಮಿಕ ಆಫೀನಲ್ಲಿ ಬೆಳೆದಿತ್ತು. ಅದಕ್ಕೂ ಮೊದಲು ಶಿಕ್ಷಣ ಇಲ್ಲದವರು ಮಾತಿನ ಮೋಡಿಗೆ ಒಳಗಾಗುತ್ತಿದ್ದರು.

ಆದರೆ 2013ರ ನಂತರ ಸುಶಿಕ್ಷಿತರು ಸಹ ಭಾವನಾತ್ಮಕ ಲೋಕದಲ್ಲಿ ತೇಲಾಡುತ್ತಿದ್ದಾರೆ. ನಮ್ಮ ದೇಶ ವಿಶ್ವ ಗುರುವಾಗುತ್ತದೆ, ನಾವು ಇಡೀ ಪ್ರಪಂಚಕ್ಕೆ ಮಾದರಿಯಾಗುತ್ತೇವೆ, ನಮ್ಮ ದೇಶ ಅಭಿವೃದ್ಧಿ ಪಥದತ್ತ ಹೋಗುತ್ತದೆ ಎಂದು ಸೂಲಿಬೆಲೆ ಹುಡುಗ್ರನ್ನು ಹಾಳು ಮಾಡಿ, ತಲೆಕೆಡಿಸಿದ ಎಂದು ಹೇಳಿದರು.

ಅಂಬೇಡ್ಕರ್‌ನನ್ನು ದೇವರಂಥೆ ಪೂಜೆ ದಲಿತ ಸಮುದಾಯವರು ಮಾಡುತ್ತಿದ್ದಾರೆ. ಬಂಟರು, ಬಿಲ್ಲವರು, ಕ್ರಿಶ್ಚಿಯನ್‌, ಗೌಡರು, ಮುಸ್ಲಿಂಮರು ಅಂಬೇಡ್ಕರ್‌ನಿಂದ ನಾವು ಏನೂ ಪಡೆದುಕೊಂಡಿಲ್ಲವೇ ಎಂದು ಅವರು ಪ್ರಶ್ನಿಸಿದರು.

ನಿಮ್ಮಲ್ಲಿ ಸಂಪೂರ್ಣ ಅಧಿಕಾರ ಇದೆ. ನಿಮಗೆ ಧಮ್‌ ಇದ್ರೆ, ತಾಕತ್ತಿದ್ರೆ ಮೀಸಲಾತಿ ತೆರವು ಮಾಡಿ ಎಂದು ಸವಾಲೆಸೆದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, ಸಂವಿಧಾನವನ್ನು ರಚಿಸಿ,ಅದಕ್ಕೊಂದು ಹೊಸ ರೂಪ ಕೊಟ್ಟುವರು ಅಂಬೇಡ್ಕರ್‌ ಎಂದರು.

ಕಮ್ಯುನಿಸ್ಟ್  ನಾಯಕ ಸುನಿಲ್‌ ಕುಮಾರ್‌ ಬಜಾಲ್‌ ಹಾಗೂ ದಲಿತ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು