1:25 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ವಿಟಮಿನ್ ‘ಎ’ ಪ್ರಾಮುಖ್ಯತೆ: ಯಾವುದರಲೆಲ್ಲ ಇದು ಸಿಗುತ್ತದೆ?; ಕೊರತೆಯ ಲಕ್ಷಣಗಳೇನು ?

28/01/2022, 23:31

ಮೊಟ್ಟ ಮೊದಲು ಕಂಡುಹಿಡಿದ ವಿಟಮಿನ್ ಅಂದರೆ ವಿಟಮಿನ್ A. ಇದು ಕಣ್ಣಿನ ಆರೋಗ್ಯಕ್ಕೆ ಬೇಕಾದ ಅತೀ ಮುಖ್ಯವಾದ ಅಂಶವಾಗಿದೆ. ಇದು ಸಸ್ಯಾಹಾರ ಹಾಗು ಮಾಂಸಾಹಾರ ಎರಡೂ ಮೂಲಗಳಿಂದ ದೊರೆಯುತ್ತದೆ.

ಮೊಟ್ಟೆ, ಕೋಳಿ ಮಾಂಸ, ಲಿವರ್, ಹಾಲು, ತುಪ್ಪ ,ಬೆಣ್ಣೆ, ಕಾಳುಗಳು , ಹಸಿರು ತರಕಾರಿ, ಕ್ಯಾರಟ್, ಸಿಹಿಗುಂಬಳಕಾಯಿ, ಹಳದಿ ಬಣ್ಣದ ಹಣ್ಣು ಪಪ್ಪಾಯ, ಮಾವಿನಕಾಯಿ, ಫಿಶ್ ಲಿವರ್ ಆಯಿಲ್ ಇವುಗಳಲ್ಲಿ ಹೇರಳವಾಗಿ ವಿಟಮಿನ್ A ಕಂಡು ಬರುತ್ತದೆ.

ಬೇರೆ ಬೇರೆ ಕಾರಣಗಳಿಂದ ಇದರ ಅಂಶದ ಕೊರತೆ  ನಮ್ಮ ದೇಹದಲ್ಲಿ ಕಂಡುಬರುತ್ತದೆ.

* ಜೀರ್ಣನಾಂಗವ್ಯೂಹದಲ್ಲಿನ ತೊಂದರೆಯಿಂದಾಗಿ ನಾವು ಸೇವಿಸಿದ ವಿಟಮಿನ್ಅನ್ನು ನಮ್ಮ ದೇಹ ಸರಿಯಾಗಿ ಹೀರಿಕೊಳ್ಳದೇ ಇರುವುದರಿಂದ

* ಲಿವರ್ /ಪಿತ್ತಜನಕಾಂಗದ ಖಾಯಿಲೆ

* ಗರ್ಭಿಣಿಯರಲ್ಲಿ, ಬೆಳೆಯುವ ಮಕ್ಕಳಲ್ಲಿ ಅಧಿಕ  ಬೇಡಿಕೆ  ಇದ್ದಾಗ ಸರಿಯಾಗಿ ಆಹಾರದಲ್ಲಿ ಪೂರೈಕೆ ಆಗದೇ ಇರುವುದರಿಂದ ವಿಟಮಿನ್ A ಕೊರತೆ ಉಂಟಾಗುತ್ತದೆ.

ಲಕ್ಷಣಗಳು ಏನು?:

ಮೊತ್ತ ಮೊದಲಿಗೆ ಕಂಡು ಬರುವ ಲಕ್ಷಣ ಎಂದರೆ ಇರುಳುಗಣ್ಣು, ಮಂದ ಬೆಳಕಿನಲ್ಲಿ ಸರಿಯಾಗಿ ಕಾಣಿಸದೇ ಇರುವುದು, ಒಣ ಚರ್ಮ, ಮೂಳೆಗಳ ಸರಿಯಾದ ಬೆಳವಣಿಗೆ ಆಗದೆ ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗುವುದು, ರೋಗ ನಿರೋಧಕ ಶಕ್ತಿ ಕಡಿಮೆ ಆಗಿ ಸೋಂಕು  ಸುಲಭವಾಗಿ ತಗಲುವುದು , ನರಗಳ ಕಾರ್ಯಕ್ಷಮತೆ ತಗ್ಗುವುದು, ಕಣ್ಣಿನ ಬಿಳಿಭಾಗಕ್ಕೆ ಸಂಬಂಧಿಸಿದ ತೊಂದರೆ, ಕೆಲವೊಮ್ಮೆ ಶಾಶ್ವತವಾಗಿ ದೃಷ್ಟಿಹೀನರನ್ನಾಗಿ ಮಾಡಬಹುದು.

RDA ಪ್ರಕಾರ ಒಬ್ಬ ಆರೋಗ್ಯವಂತನಿಗೆ, ಮಗುವಿನಿಂದ ಹಿಡಿದು ವಯಸ್ಕರವರೆಗೆ ದಿನವೊಂದಕ್ಕೆ ಸುಮಾರು 350ರಿಂದ 950 ಮೈಕ್ರೋ ಗ್ರಾಂನಷ್ಟು ವಿಟಮಿನ್ A ಆಹಾರದ ಮೂಲಕ ಸೇವನೆ ಮಾಡುವುದದಿಂದ ಈ ಎಲ್ಲಾ ತೊಂದರೆಗಳು ಬಾರದಂತೆ ತಡೆಗಟ್ಟಬಹುದು. ಹಾಗೆಂದು ಅತಿಯಾದ ಸೇವನೆಯೂ ಸಹ ತೊಂದರೆಯನ್ನ ಉಂಟುಮಾಡಬಹುದು. ಆದ್ದರಿಂದ ದೇಹಕ್ಕೆ ಅನುಗುಣವಾಗಿ ಸರಿಯಾದ ಪ್ರಮಾಣವನ್ನು ಸೇವನೆ ಮಾಡುವುದು ಒಳಿತು.

✍️ ಡಾ. ಭವ್ಯ ಶೆಟ್ಟಿ

ಹೋಮಿಯೋಪತಿ ವೈದ್ಯರು

ಶ್ರೀ ಗುರು ಹೋಮಿಯೋಪತಿ ಕ್ಲೀನಿಕ್ ಬೆಳುವಾಯಿ

ಇತ್ತೀಚಿನ ಸುದ್ದಿ

ಜಾಹೀರಾತು