11:07 AM Tuesday3 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ವಿಟಮಿನ್ ‘ಎ’ ಪ್ರಾಮುಖ್ಯತೆ: ಯಾವುದರಲೆಲ್ಲ ಇದು ಸಿಗುತ್ತದೆ?; ಕೊರತೆಯ ಲಕ್ಷಣಗಳೇನು ?

28/01/2022, 23:31

ಮೊಟ್ಟ ಮೊದಲು ಕಂಡುಹಿಡಿದ ವಿಟಮಿನ್ ಅಂದರೆ ವಿಟಮಿನ್ A. ಇದು ಕಣ್ಣಿನ ಆರೋಗ್ಯಕ್ಕೆ ಬೇಕಾದ ಅತೀ ಮುಖ್ಯವಾದ ಅಂಶವಾಗಿದೆ. ಇದು ಸಸ್ಯಾಹಾರ ಹಾಗು ಮಾಂಸಾಹಾರ ಎರಡೂ ಮೂಲಗಳಿಂದ ದೊರೆಯುತ್ತದೆ.

ಮೊಟ್ಟೆ, ಕೋಳಿ ಮಾಂಸ, ಲಿವರ್, ಹಾಲು, ತುಪ್ಪ ,ಬೆಣ್ಣೆ, ಕಾಳುಗಳು , ಹಸಿರು ತರಕಾರಿ, ಕ್ಯಾರಟ್, ಸಿಹಿಗುಂಬಳಕಾಯಿ, ಹಳದಿ ಬಣ್ಣದ ಹಣ್ಣು ಪಪ್ಪಾಯ, ಮಾವಿನಕಾಯಿ, ಫಿಶ್ ಲಿವರ್ ಆಯಿಲ್ ಇವುಗಳಲ್ಲಿ ಹೇರಳವಾಗಿ ವಿಟಮಿನ್ A ಕಂಡು ಬರುತ್ತದೆ.

ಬೇರೆ ಬೇರೆ ಕಾರಣಗಳಿಂದ ಇದರ ಅಂಶದ ಕೊರತೆ  ನಮ್ಮ ದೇಹದಲ್ಲಿ ಕಂಡುಬರುತ್ತದೆ.

* ಜೀರ್ಣನಾಂಗವ್ಯೂಹದಲ್ಲಿನ ತೊಂದರೆಯಿಂದಾಗಿ ನಾವು ಸೇವಿಸಿದ ವಿಟಮಿನ್ಅನ್ನು ನಮ್ಮ ದೇಹ ಸರಿಯಾಗಿ ಹೀರಿಕೊಳ್ಳದೇ ಇರುವುದರಿಂದ

* ಲಿವರ್ /ಪಿತ್ತಜನಕಾಂಗದ ಖಾಯಿಲೆ

* ಗರ್ಭಿಣಿಯರಲ್ಲಿ, ಬೆಳೆಯುವ ಮಕ್ಕಳಲ್ಲಿ ಅಧಿಕ  ಬೇಡಿಕೆ  ಇದ್ದಾಗ ಸರಿಯಾಗಿ ಆಹಾರದಲ್ಲಿ ಪೂರೈಕೆ ಆಗದೇ ಇರುವುದರಿಂದ ವಿಟಮಿನ್ A ಕೊರತೆ ಉಂಟಾಗುತ್ತದೆ.

ಲಕ್ಷಣಗಳು ಏನು?:

ಮೊತ್ತ ಮೊದಲಿಗೆ ಕಂಡು ಬರುವ ಲಕ್ಷಣ ಎಂದರೆ ಇರುಳುಗಣ್ಣು, ಮಂದ ಬೆಳಕಿನಲ್ಲಿ ಸರಿಯಾಗಿ ಕಾಣಿಸದೇ ಇರುವುದು, ಒಣ ಚರ್ಮ, ಮೂಳೆಗಳ ಸರಿಯಾದ ಬೆಳವಣಿಗೆ ಆಗದೆ ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗುವುದು, ರೋಗ ನಿರೋಧಕ ಶಕ್ತಿ ಕಡಿಮೆ ಆಗಿ ಸೋಂಕು  ಸುಲಭವಾಗಿ ತಗಲುವುದು , ನರಗಳ ಕಾರ್ಯಕ್ಷಮತೆ ತಗ್ಗುವುದು, ಕಣ್ಣಿನ ಬಿಳಿಭಾಗಕ್ಕೆ ಸಂಬಂಧಿಸಿದ ತೊಂದರೆ, ಕೆಲವೊಮ್ಮೆ ಶಾಶ್ವತವಾಗಿ ದೃಷ್ಟಿಹೀನರನ್ನಾಗಿ ಮಾಡಬಹುದು.

RDA ಪ್ರಕಾರ ಒಬ್ಬ ಆರೋಗ್ಯವಂತನಿಗೆ, ಮಗುವಿನಿಂದ ಹಿಡಿದು ವಯಸ್ಕರವರೆಗೆ ದಿನವೊಂದಕ್ಕೆ ಸುಮಾರು 350ರಿಂದ 950 ಮೈಕ್ರೋ ಗ್ರಾಂನಷ್ಟು ವಿಟಮಿನ್ A ಆಹಾರದ ಮೂಲಕ ಸೇವನೆ ಮಾಡುವುದದಿಂದ ಈ ಎಲ್ಲಾ ತೊಂದರೆಗಳು ಬಾರದಂತೆ ತಡೆಗಟ್ಟಬಹುದು. ಹಾಗೆಂದು ಅತಿಯಾದ ಸೇವನೆಯೂ ಸಹ ತೊಂದರೆಯನ್ನ ಉಂಟುಮಾಡಬಹುದು. ಆದ್ದರಿಂದ ದೇಹಕ್ಕೆ ಅನುಗುಣವಾಗಿ ಸರಿಯಾದ ಪ್ರಮಾಣವನ್ನು ಸೇವನೆ ಮಾಡುವುದು ಒಳಿತು.

✍️ ಡಾ. ಭವ್ಯ ಶೆಟ್ಟಿ

ಹೋಮಿಯೋಪತಿ ವೈದ್ಯರು

ಶ್ರೀ ಗುರು ಹೋಮಿಯೋಪತಿ ಕ್ಲೀನಿಕ್ ಬೆಳುವಾಯಿ

ಇತ್ತೀಚಿನ ಸುದ್ದಿ

ಜಾಹೀರಾತು