8:10 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು