11:13 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು