1:05 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು