9:10 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು

29/01/2022, 15:19

ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ.
ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.

ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೊ(22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇದನ್ನು ತಡೆಯಲು ನೀರಿಗೆ ಹಾರಿದ ಲಾಯ್ಡ್ ಸಾವನ್ನಪ್ಪಿದ್ದಾರೆ. ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಲಾಯ್ಡ್ ಡಿಸೋಜ ಮತ್ತು ಅಶ್ವಿತಾ ಹಲವು ವರುಷಗಳಿಂದ ಪರಸ್ಪರ ಪ್ರೇಮಿಸುತ್ತಿದ್ದರಂತೆ. ಈ ನಡುವೆ ಲಾಯ್ಡ್ ಅವರಿಗೆ ಬೇರೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಇದೆ ಎಂಬುದು ಅಶ್ವಿತಾ ಆರೋಪಿಸಿದ್ದರು.
ಇದರ ಕುರಿತು ಮಾತುಕತೆಗಾಗಿ ಶುಕ್ರವಾರ ಸಂಜೆ ಪ್ರೇಮಿಗಳಿಬ್ಬರು ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಸೇರಿದ್ದಾರೆ. ಮಾತುಕತೆ ವೇಳೆ ಅಶ್ವಿತಾ ಬೇಸರಗೊಂಡು ಏಕಾಏಕಿ‌ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ಲಾಯ್ಡ್ ಕೂಡಾ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಾವಳಿ ಕಾವಲು ಪಡೆಯ ಮೋಹನ್ ಚಂದ್ರ, ಸುಜಿತ್, ಅಶೋಕ್ ಸೋಮೇಶ್ವರ, ಮೀನುಗಾರರಾದ ಕಲ್ಪೇಶ್ ಹಾಗೂ ಗಿರೀಶ್ ಸಮುದ್ರಪಾಲಾದವರನ್ನು ಹರಸಾಹಸಪಟ್ಟು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಲಾಯ್ಡ್ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು