6:46 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ನ್ಯಾಯಾಧೀಶರ ಗಡಿಪಾರು ಮಾಡಿ; ದಲಿತರ ಪರ ಸಂಘಟನೆಗಳ ಆಗ್ರಹ; ರಾಜ್ಯಪಾಲರಿಗೆ ಮನವಿ

29/01/2022, 20:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka.com

ರಾಯಚೂರು ಜಿಲ್ಲಾ ನ್ಯಾಯಾಧೀಶ ಎಂ.ಸಿ.ಪಾಟೀಲ್ ಗೌಡ ಅವರನ್ನು ಗಡಿಪಾರು ಮಾಡುವಂತೆ  ದಲಿಪರ ಸಂಘಟನೆಗಳು ಅಗ್ರಹಿಸಿವೆ. 

ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಈ ಕೃತ್ಯವನ್ನುಖಂಡಿಸಿದ್ದು, ತಾಲೂಕು ಪಂಚಾಯ್ತಿ ಕಚೇರಿಯಿಂದ ಪ್ರತಿಭಟನೆ ಪ್ರಾರಂಭಿಸಿದ ಪ್ರತಿಭಟನೆಕಾರರು ನ್ಯಾಯಾಧೀಶನ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ, ಬಸವೇಶ್ವರ ವೃತದ ಬಳಿ ಪ್ರತಿಭಟನೆ ನಡೆಸಿನ್ಯಾಯಾಧೀಶರ ವಿರುದ್ಧ ಘೋಷಣೆ ಕೂಗಿ ಶಿಸ್ತು ಕ್ರಮಕ್ಕೆ ಆಗ್ರಹಿಸಿದರು. 

ನಂತರ ತಹಶೀಲ್ದಾರರ ಕಚೇರಿಗೆ ತರಳಿ ತಹಶೀಲ್ದಾರರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ದಲಿತ ಹೋರಾಟಗಾರ ದೊಡ್ಡಬಸಪ್ಪ, ರೈತ ಮುಖಂಡಾದ ಅಡಿವೆಪ್ಪ, ಷಂಶದ್ ಬೇಗಂ, ಸರೋಜಮ್ಮ, ಕೋಗಳಿ ಮಲ್ಲೇಶಪ್ಪ, ಅಕ್ಕಮಹಾದೇವಿ, ಹೊಸಕೇರಿ ಹೆಚ್.ಜಿ.ಸ್ವಾಮಿ, ಹೆಚ್.ಎಂ.ಚಾರೆಪ್ಪ, ಮಾದೂರು ಮಹೇಶ, ಹೆಚ್ ಮರಿಸ್ವಾಮಿ, ಕಾಳಿ ಬಸವರಾಜ,ಚಿಲುಗೋಡು ಮೈಲಪ್ಪ, ಕೆ.ಮಹೇಶ,ಉಪ್ಪಾರಗಟ್ಟಿ ಬುಳ್ಳಪ್ಪ,ಮೇಘರಾಜ, ಎಂ.ಮೈಲಪ್ಪ,ಹೆಚ್.ಮರಿಯಪ್ಪ,ಉಲುವತ್ತಿ ಓಮೇಶ,ಅಲಬೂರು ಗಣೇಶ,ಎ.ಕೆ.ರಾಮಣ್ಣ,ಅರೇಗೊಂಡನಹಳ್ಳಿ ದುರುಗಪ್ಪ, ಮೋರಗೇರಿ ರಮೇಶ,ಹೆಚ್.ಭರ್ಮಪ್ಪ,ಕ.ದ.ಸಂ.ಸಮಿತಿ ವಿಜಯನಗರ ಜಿಲ್ಲಾಧ್ಯಕ್ಷ ಹಂಪಾ ಪಟ್ಣ ರಮೇಶ, ಸೇರಿದಂತೆ ಡಾ. ಬಿ.ಆರ್.ಅಂಬೇಡ್ಕರ್ ಸಂಘ ಹಾಗ ಮಾದಿಗ ಮೀಸಲಾಯಿ ಹೋರಾಟ ಸಮಿತಿ ಅಧ್ಯಕ್ಷ ಎಸ್.ಬಿ.ಪ್ರಕಾಶ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ದಲಿತ ಮುಖಂಡರು ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಗಡಿಪಾರು ಮಾಡಲು ಆಗ್ರಹಿಸಿದೆ.

ತಹಶೀಲ್ದಾರರ ವಿಳಂಬ ನೀತಿಗೆ ಖಂಡನೆ: ಪ್ರತಿಭಟನೆಕಾರರು ತಹಶೀಲ್ದಾರರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಲು ಬಂದು 45 ನಿಮಿಷಗಳ ಕಾಲ ಕಾದರೂ ಕೂಡ ತಹಶೀಲ್ದಾರರು ಅವರ ಮನವಿ ಪತ್ರ ಸ್ವೀಕರಿಸಲು ಕಚೇರಿಗೆ ಬಾರದ ಕಾರಣ ದಲಿತ ಮುಖಂಡರು ತಹಶೀಲ್ದಾರರ ವಿರುದ್ಧ ಕೆಂಡಾಮಂಡಲವಾದರು. ತಹಶೀಲ್ದಾರರ ಕಚೇರಿಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಕಾರಣ ಪ್ರತಿ ಬಾರಿಯೂ ಇದೇ ತೆರನಾಗಿ ತಹಶೀಲ್ದಾರರು ವಿನಾಕಾರಣ ವಿಳಂಬ ನೀತಿಯ ಧೋರಣೆ ತೋರಿದ್ದಾರೆ ಎಂದು ಅವರು ದೂರಿದರು. ದಲಿತರ ಹೋರಾಟದ ಸಂದರ್ಭಗಳಲ್ಲಿ ತಹಶೀಲ್ದಾರರು ಅನಾಧಾರ ತೋರುತ್ತಿದ್ದಾರೆ ಇದನ್ನು ತಾವು ತೀವ್ರವಾಗಿ ಖಂಡಿಸುವುದಾಗಿ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು