3:14 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ವರ್ಗಾವಣೆ: ವಿಜಿಲೆನ್ಸ್ ಕಮಿಟಿಯಿಂದ ಸೂಕ್ತ ತನಿಖೆಗೆ ಮಾಜಿ ಸಚಿವ ಖಾದರ್ ಒತ್ತಾಯ

29/01/2022, 22:40

ಮಂಗಳೂರು(reporterkarnataka.com): ರಕ್ಷಿತಾರಣ್ಯದಿಂದ ಯಾವುದೇ ಭಯವಿಲ್ಲದೇ ಮರ ಕಡಿದುಕೊಂಡು ಹೋದವರನ್ನು ತಡೆಯಲು ಯತ್ನಿಸಿದ ಅಧಿಕಾರಿಯನ್ನೇ ವರ್ಗಾವಣೆ ಮಾಡಿರುವುದು ಅತ್ಯಂತ ಗಂಭೀರವಾದ ವಿಚಾರ. ಈ ಬಗ್ಗೆ ರಾಜ್ಯ ಸರಕಾರಕ್ಕೆ ಪತ್ರ ಬರೆದು ವಿಜಿಲೆನ್ಸ್ ಕಮಿಟಿಯಿಂದ ಸಂಪೂರ್ಣವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಸರ್ವ್ ಫಾರೆಸ್ಟ್ ನಿಂದ ವ್ಯಕ್ತಿಯೋರ್ವರು ನೂರಾರು ಮರ ಕಡಿದು ಸಾಗಿಸುತ್ತಿರುವಾಗ ವಾಹನಕ್ಕೆ ಮುಟ್ಟುಗೋಲು ಹಾಕಲಾಗಿದೆ. ಈ ಸಂದರ್ಭ ಆತನ ಬಿಡುಗಡೆಗೆ ರಾಜಕೀಯ ಒತ್ತಡ ತಂದಾಗ, ಬಿಡುಗಡೆ ಮಾಡದ ವಲಯ ಅರಣ್ಯಾಧಿಕಾರಿಯನ್ನು ವರ್ಗಾವಣೆ ಮಾಡಿರುವ ಮಾಹಿತಿ ಇದೆ. ರಿಸರ್ವ್ ಫಾರೆಸ್ಟ್ ನಿಂದ ಒಬ್ಬರು ಯಾವುದೇ ಭಯವಿಲ್ಲದೇ ಮರ ಕಡಿದುಕೊಂಡು ಹೋಗುತ್ತಾರೆ, ಅದನ್ನು ತಡೆಯಲು ಯತ್ನಿಸಿದ ಅಧಿಕಾರಿಯನ್ನು ವರ್ಗಾವಣೆ ಮಾಡುತ್ತಾರೆ ಅಂದ್ರೆ ಇದು ಬಹಳ ಗಂಭೀರವಾದ ವಿಚಾರ. ಈ ಬಗ್ಗೆ ರಾಜ್ಯ ಅರಣ್ಯ ವಿಜಿಲೆನ್ಸ್ ಸ್ಕ್ಯಾಡ್ ನಿಂದ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ ಬರೆಯುವುದಾಗಿ ಖಾದರ್ ನುಡಿದರು.

ಉಡುಪಿ ಅರಣ್ಯ ಸಂಚಾರಿ ದಳದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಎಂಬವರನ್ನು ಶಾಸಕ ಹರೀಶ್ ಪೂಂಜ, ವಿನಾಕಾರಣ ರಾಜಕೀಯ ದ್ವೇಷದಿಂದ ಬೀದರ್ ಗೆ ವರ್ಗಾಯಿಸಿರುವ ಬಗ್ಗೆ ಆರೋಪವಿದೆ. ಈ ಸಂಬಂಧ ಅಧಿಕಾರಿ ಸಂಧ್ಯಾ ಬಿಲ್ಲವ ಸಂಘಕ್ಕೆ ದೂರು ನೀಡಿರುವ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, `ತಾಲೂಕಿನ ಅಕ್ರಮ ಮರಗಳ ಸಾಗಾಟಗಾರರ ಮರಮಟ್ಟು ಹಾಗೂ ವಾಹನ ಇಲಾಖೆ ವಶಪಡಿಸಿದೆ. ಮೇಲಿನ ಅಧಿಕಾರಿಗಳ ಆದೇಶದ ಮೇರೆಗೆ ಅಕ್ರಮ ಮರ ದಾಸ್ತಾನುಗಳಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದೇನೆ. ಆದರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವೈಯಕ್ತಿಕ ದ್ವೇಷದಿಂದ, ಅಕ್ರಮ ಮರಗಳ್ಳರಿಗೆ ಅನುಕೂಲ ಮಾಡಿಕೊಡುವ ಎದ್ದೇಶದಿಂದ ದ ಬೀದರ್ ಗೆ

ವರ್ಗಾಯಿಸಿರುತ್ತಾರೆ’ ಎಂಬುದಾಗಿ ಆರೋಪಿಸಿದ್ದು, ನ್ಯಾಯ ನೀಡುವಂತೆ ಕೋರಿದ್ದಾರೆ. ಇದರೊಂದಿಗೆ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಿಎಂಗೆ ಬರೆದ ಪತ್ರ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು