9:42 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ನಾಟೆಕಲ್‌ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ

29/01/2022, 22:58

ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟೆಕಲ್‌ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಸೋಮವಾರದಿಂದ ಕಚೇರಿ ಕಾರ್ಯದ ವಯರಿಂಗ್, ಸಾಫ್ಟ್‌ವೇರ್ ಅಳವಡಿಕೆ ಹೀಗೆ ತಾಂತ್ರಿಕ ಕೆಲಸ ಆರಂಭವಾಗುತ್ತದೆ. ಇದಾದ ಒಂದು ತಿಂಗಳೊಳಗೆ ಅಧಿಕೃತವಾಗಿ ಎಲ್ಲಾ ಸವಲತ್ತುಗಳೊಂದಿಗೆ ಉದ್ಘಾಟನೆ ನಡೆಸಲಿದ್ದೇವೆ.

ನೂತನ ಉಳ್ಳಾಲ ತಾಲೂಕು ಆಡಂ ಕುದ್ರುವಿನಿಂದ ಆರಂಭವಾಗಿ ತಲಪಾಡಿ ಗಡಿ ಹಾಗೂ ಸಜಿಪ ಪಡು ಸಾಲೆತ್ತೂರುವರೆಗೆ ಉಳ್ಳಾಲ ತಾಲೂಕು ಇರಲಿದೆ. ಇದರ ಜೊತೆಗೆ ಮಂಗಳೂರು ವಿಧಾನಸಭೆ ಕ್ಷೇತ್ರದ ಕೋಡ್ಮಣ್, ಮೇರಮಜಲ್, ಪುದು ಹಾಗೂ ತುಂಬೆ ಬಂಟ್ವಾಳ ತಾಲ್ಲೂಕಿನಲ್ಲೇ ಮುಂದುವರೆಯಲಿದೆ.

ಈಗಾಗಲೇ ಸಜಿಪದಿಂದ ತುಂಬೆಗೆ ಸಂಪರ್ಕಿಸುವ ಸೇತುವೆಯ ಕಾರ್ಯ ಕೊನೆಯ ಹಂತದಲ್ಲಿದೆ. ಅದರ ಕೆಲಸ ಮುಗಿದ ತಕ್ಷಣ ಉಳ್ಳಾಲ ಗ್ರಾಮಕ್ಕೆ ಈ ಗ್ರಾಮಗಳನ್ನು ಸೇರಿಸುವ ಬಗ್ಗೆ ಪರಿಶೀಲಿಸಲಾಗುವುದು.

ಕಳೆದ ಬಾರಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್‌ನಲ್ಲಿ ಉಳ್ಳಾಲ ನೂತನ ತಾಲೂಕು ಆಗಿ ಘೋಷಣೆಯಾಗಿತ್ತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು