8:35 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ರಾಗಿ ಖರೀದಿ ಸ್ಥಗಿತ ಆದೇಶ ರದ್ದುಪಡಿಸಿ, ಹದಗೆಟ್ಟ ಜಿಲ್ಲಾಡಳಿತ ಸರಿಪಡಿಸಿ: ಉಸ್ತುವಾರಿ ಸಚಿವ ಮುನಿಸ್ವಾಮಿಗೆ ರೈತಸಂಘ ಆಗ್ರಹ

30/01/2022, 09:36

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಸ್ಥಗಿತ ಮಾಡಿರುವ ಆದೇಶವನ್ನು ವಾಪಸ್ಸು ಪಡೆದು ಟೆಮೊಟೋ ಮಾರುಕಟ್ಟೆ ಜಾಗದ ಸಮಸ್ಯೆಯನ್ನು ಬಗೆಹರಿಸಿ ಹದಗೆಟ್ಟಿರುವ ಜಿಲ್ಲಾಡಳಿತವನ್ನು ಸರಿಪಡಿಸಬೇಕೆಂದು ರೈತಸಂಘದಿಂದ ಉಸ್ತುವಾರಿ ಸಚಿವ ಮುನಿರತ್ನ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. 

ಮನವಿ ನೀಡಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವರು , ಕೇಂದ್ರ ಸರ್ಕಾರ ಎಂ.ಎಸ್.ಪಿ ದರದಲ್ಲಿ ಪ್ರತಿ ಕ್ವಿಂಟಾಲ್ ರಾಗಿಗೆ 3377 ರೂ. ದರದಲ್ಲಿ ಪ್ರತಿ ರೈತರಿಂದ 50 ಕ್ವಿಂಟಾಲ್ ಖರೀದಿ ಮಾಡುವ ಆದೇಶವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು. ಆದರೆ ನೂರೊಂದು ನೆಪ ಹೇಳಿ ರಾಜ್ಯ ಸರ್ಕಾರ ಶೇ. 50 % ರಷ್ಟು ಖರೀದಿ ಆದ ನಂತರ ರಾಜ್ಯದ ಎಲ್ಲಾ ಖರೀದಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ಮುಖಾಂತರ ದಲ್ಲಾಳಿಗಳಿಗೆ ಅನುಕೂಲವಾಗುವ ರೀತಿ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

ರೈತಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌ ಮಾತನಾಡಿ, ಜಿಲ್ಲಾದ್ಯಂತ ಸರ್ಕಾರಿ ಕಚೇರಿಗಳು ದಲ್ಲಾಳಿಗಳ ಕಚೇರಿಯಾಗಿ ಮಾರ್ಪಟ್ಟಿವೆ. ಹಣವಿಲ್ಲದೆ ಜನಸಾಮಾನ್ಯರ ನೆರಳು ಸಹ ಕಚೇರಿಗಳ ಒಳಗಡೆ ಬೀಳುವಂತಿಲ್ಲ. ಅಷ್ಟರಮಟ್ಟಿಗೆ ಸರ್ಕಾರಿ ಕಛೇರಿಗಳು ಹದಗೆಟ್ಟಿರುವ ಜೊತೆಗೆ ರೈತರ ಜೀವನಾಡಿಯಾಗಿರುವ ತಾಲ್ಲೂಕು ಕಛೇರಿಯಲ್ಲಿ ಜನನ ಪ್ರಮಾಣ ಪತ್ರದಿಂದ ಮರಣ ಪ್ರಮಾಣ ಪತ್ರ ಪಡೆಯಬೇಕಾದರೆ ಗಾಂಧಿ ನೋಟು ಕೊಡುವ ಜೊತೆಗೆ ಪಿ ನಂಬರ್ , ದುರಸ್ತಿ ಹೆಸರಿನಲ್ಲಿ ಲಕ್ಷ ಲಕ್ಷ ಬಡವರ ರಕ್ತ ಹೀರುವ ಇಲಾಖೆಗಳಾಗಿ ಅಧಿಕಾರಿಗಳು ಸೃಷ್ಟಿಮಾಡಿಕೊಂಡಿದ್ದಾರೆಂದು ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕೆಂದರು.

ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ , ಹತ್ತಾರು ವರ್ಷಗಳಿಂದ ರೈತರ ಜೀವನಾಡಿಯಾಗಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಜಾಗದ ಸಮಸ್ಯೆ ಬಗೆಹರಿಸುವಂತೆ ಸರ್ಕಾರಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಮನವಿ ನೀಡಿದರೂ ಸಮಸ್ಯೆ ಬಗೆಹರಿಸದೇ ಪ್ರತಿ ವರ್ಷ ಟೆಮೊಟೋ ಅವಕ ಹೆಚ್ಚಾದಾಗ ಮಾರುಕಟ್ಟೆಯಲ್ಲಿ ಜಾಗದ ಸಮಸ್ಯೆ ವಾಹನ ಸಂಚಾರದಿಂದ ರೈತರಿಗೆ ನಷ್ಟವಾಗುತ್ತಿದೆ. ಜಿಲ್ಲಾಡಳಿತ ಕೃಷಿ ಉತ್ಪನ್ನ ಆಡಳಿತ ಮಂಡಳಿ ಈಗಾಗಲೇ ಸ್ಥಳ ಗುರುತಿಸಿ ಸರ್ಕಾರದ ಮಟ್ಟದಲ್ಲಿ ಕಡತ ಇರುವುದರಿಂದ ಕಂದಾಯ ಸಚಿವರ ಬಳಿ ಮಾತನಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಜಾಗದ ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಉಸ್ತುವಾರಿ ಸಚಿವ

 ಮುನಿರತ್ನ ಅವರು ರಾಗಿ ಖರೀದಿ ಸ್ಥಗಿತದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬಗೆಹರಿಸುವ ಜೊತೆಗೆ ಟೊಮೊಟೋ ಮಾರುಕಟ್ಟೆಯ ಜಾಗದ ಸಮಸ್ಯೆ ಹಾಗೂ ಸರ್ಕಾರಿ ಕಛೇರಿಗಳ ಅವವ್ಯಸ್ಥೆಯನ್ನು ಸರಿಪಡಿಸುವ ಭರವಸೆಯನ್ನು ನೀಡಿದರು. 

ಮನವಿ ನೀಡುವಾಗ ಜಿಲ್ಲಾ ಗೌರವಾಧ್ಯಕ್ಷ ಮಂಗಸಂದ್ರ ತಿಮ್ಮಣ್ಣ , ನಗರ ಸಂಚಾಲಕ ಮಂಗಸಂದ್ರ ನಾಗೇಶ್ , ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ , ಪತ್ತೇರಿ ರಾಜು , ಕುವಣ್ಣ , ಜಿಲ್ಲಾ ಕಾರ್ಯದಕ್ಷ ವಕ್ಕಲೇರಿ ಹನುಮಯ್ಯ , ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಯಲವಳ್ಳಿ ಪಭಾಕರ್‌ , ಮಾಲೂರು ತಾಲ್ಲೂಕು ಅಧ್ಯಕ್ಷ ಪೆಮ್ಮದೊಡ್ಡಿ ಯಲ್ಲಣ್ಣ , ರಾಜ್ಯ ಸಂಚಾಲಕ ಬಂಗವಾದಿ ನಾಗರಾಜ್‌ಗೌಡ , ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ತೆರಹಳ್ಳಿ ಆಂಜಿನಪ್ಪ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು