1:28 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಗಣಕ ಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ: ವಿಜಯಪುರ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಆದೇಶ

30/01/2022, 10:31

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 31ರಿಂದ ಫೆಬ್ರವರಿ 7ರ ವರೆಗೆ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧ ಹೇರಲಾಗಿದೆ.

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ ನಡೆಯಲಿದೆ. ಸಿಆರ್‌ಪಿಸಿ 1674ರ ಕಲಂ 144ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. 

ಈ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ಅಂಗಡಿಗಳು, ಕಂಪ್ಯೂಟರ್ ಸೆಂಟರಗಳು, ಸೈಬರ್ ಕೆಫೆಗಳು,ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶಿಸಿದ್ದಾರೆ.

ಅದರಂತೆ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದ್ದು, ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು