6:04 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ

30/01/2022, 21:54

ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು.

ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದಿ ಬಿಡುಗಡೆಯಲ್ಲಿ ಒಂದು ವರ್ಷ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಹಾಗೆ ಸಾಕಷ್ಟು ಕಿರಿಯ ಪತ್ರಕರ್ತರಿಗೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಿದ್ದರು.

ಸುರೇಶ ಬೆಳಗಜೆ-  ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರನ್ನು ವರಿಸಿದ ವಧು ಶ್ರೀರಂಜಿತಾ ಅವರು ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಅಧಿಕಾರಿ ಸತ್ಯನಾರಾಯಣ ಭಟ್ ಮತ್ತು ಪಾರ್ವತಿ ದಂಪತಿಯ ಪುತ್ರಿ.

ಮದುವೆ ಸಮಾರಂಭ ಜನವರಿ 26ರಂದು ನಡೆಯಿತು. ಕೋವಿಡ್ ಕಾರಣಕ್ಕೆ ನಿಗದಿತ ಮಿತಿಯಲ್ಲಿ ಆಹ್ವಾನಪತ್ರ ನೀಡಿದ್ದು, ಕಡಿಮೆ ಜನರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿತು. ಬಳಿಕ ರಾತ್ರಿ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಬೆಳಗಜೆ ಮನೆಯಲ್ಲಿ ವಧೂ ಗೃಹಪ್ರವೇಶವೂ ಕೋವಿಡ್ ಶಿಷ್ಟಾಚಾರದೊಂದಿಗೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು