4:15 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ

30/01/2022, 21:54

ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು.

ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದಿ ಬಿಡುಗಡೆಯಲ್ಲಿ ಒಂದು ವರ್ಷ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಹಾಗೆ ಸಾಕಷ್ಟು ಕಿರಿಯ ಪತ್ರಕರ್ತರಿಗೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಿದ್ದರು.

ಸುರೇಶ ಬೆಳಗಜೆ-  ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರನ್ನು ವರಿಸಿದ ವಧು ಶ್ರೀರಂಜಿತಾ ಅವರು ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಅಧಿಕಾರಿ ಸತ್ಯನಾರಾಯಣ ಭಟ್ ಮತ್ತು ಪಾರ್ವತಿ ದಂಪತಿಯ ಪುತ್ರಿ.

ಮದುವೆ ಸಮಾರಂಭ ಜನವರಿ 26ರಂದು ನಡೆಯಿತು. ಕೋವಿಡ್ ಕಾರಣಕ್ಕೆ ನಿಗದಿತ ಮಿತಿಯಲ್ಲಿ ಆಹ್ವಾನಪತ್ರ ನೀಡಿದ್ದು, ಕಡಿಮೆ ಜನರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿತು. ಬಳಿಕ ರಾತ್ರಿ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಬೆಳಗಜೆ ಮನೆಯಲ್ಲಿ ವಧೂ ಗೃಹಪ್ರವೇಶವೂ ಕೋವಿಡ್ ಶಿಷ್ಟಾಚಾರದೊಂದಿಗೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು