4:49 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ

30/01/2022, 21:54

ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು.

ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದಿ ಬಿಡುಗಡೆಯಲ್ಲಿ ಒಂದು ವರ್ಷ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಹಾಗೆ ಸಾಕಷ್ಟು ಕಿರಿಯ ಪತ್ರಕರ್ತರಿಗೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಿದ್ದರು.

ಸುರೇಶ ಬೆಳಗಜೆ-  ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರನ್ನು ವರಿಸಿದ ವಧು ಶ್ರೀರಂಜಿತಾ ಅವರು ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಅಧಿಕಾರಿ ಸತ್ಯನಾರಾಯಣ ಭಟ್ ಮತ್ತು ಪಾರ್ವತಿ ದಂಪತಿಯ ಪುತ್ರಿ.

ಮದುವೆ ಸಮಾರಂಭ ಜನವರಿ 26ರಂದು ನಡೆಯಿತು. ಕೋವಿಡ್ ಕಾರಣಕ್ಕೆ ನಿಗದಿತ ಮಿತಿಯಲ್ಲಿ ಆಹ್ವಾನಪತ್ರ ನೀಡಿದ್ದು, ಕಡಿಮೆ ಜನರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿತು. ಬಳಿಕ ರಾತ್ರಿ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಬೆಳಗಜೆ ಮನೆಯಲ್ಲಿ ವಧೂ ಗೃಹಪ್ರವೇಶವೂ ಕೋವಿಡ್ ಶಿಷ್ಟಾಚಾರದೊಂದಿಗೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು