11:25 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ: ಸಿಎಲ್ ಪಿ  ಉಪ ನಾಯಕ ಖಾದರ್

30/01/2022, 23:47

ತೊಕ್ಕೊಟ್ಟು(reporterkarnataka.com): ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಖಾದರ್ ಹೇಳಿದರು.


ಅವರು ನಾಟೆಕಲ್ ಜಂಕ್ಷನ್ ನಿಂದ ಅಸೈಗೋಳಿ ಜಂಕ್ಷನ್ ವರೆಗೆ 10 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕಾಮಗಾರಿಗೆ  ಕೇಂದ್ರ ಸರಕಾರದ ಅನುದಾನ ಬಿಡುಗಡೆಯಾಗಿದ್ದರೆ ಟೋಲ್ ಗೇಟನ್ನು ಪ್ರಾರಂಭಿಸಲಿದ್ದರು. ಆದರೆ ಬಡ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬರಬಾರದೆಂಬ ಉದ್ದೇಶದಿಂದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಈ ರಸ್ತೆ ನಡೆಸಲಾಗುವುದು ಎಂದರು.


ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್, ಸಹಾಯಕ ಕಾರ್ಯಪಾಲ ಇಂಜಿನಿಯರ್ ಕೆ.ಟಿ.ಚಂದ್ರ ಶೇಕರಯ್ಯ ಮತ್ತು ಕನ್ಸಲ್ಟೆಂಟ್ ಕೌಶಿಕ್ ಅವರೊಂದಿಗೆ ಖಾದರ್ ಕಾಮಗಾರಿಯ ಬಗ್ಗೆ ಮಾತುಕತೆ ನಡೆಸಿದರು.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂಚಲಾಕ್ಷಿ, ಬೆಳ್ಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್, ಮಂಜನಾಡಿ ಪಂಚಾಯತ್ ಉಪಾಧ್ಯಕ್ಷ ವಿನ್ಸೆಂಟ್ ವೇಗಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ ಕಾಂಗ್ರೆಸ್ ಪ್ರಮುಖರಾದ ಎನ್.ಎಸ್. ಕರೀಂ, ರವಿರಾಜ್ ಶೆಟ್ಟಿ ದೇರಳೆಕಟ್ಟೆ, ಟಿ.ಎಸ್ ಅಬ್ದುಲ್ಲಾ, ಅಬ್ದುರ್ರಹ್ಮಾನ್ ಕೋಡಿಜಾಲ್, ನಾಸೀರ್ ಸಾಮಾನಿಗೆ, ಇಸ್ಮಾಯಿಲ್ ನಾಟೆಕಲ್, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಝರ್ ಷಾ ಪಟ್ಟೋರಿ, ಅಚ್ಚುತ ಗಟ್ಟಿ, ದೇವಣ್ಣ ಶೆಟ್ಟಿ, ಇಕ್ಬಾಲ್, ರುಕಿಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು