5:33 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ವಾಹನ ಚಾಲಕ ಆತ್ಮಹತ್ಯೆ: ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತದಿಂದ 8 ಲಕ್ಷ ರೂ. ಪರಿಹಾರ ಪ್ರಕಟ 

31/01/2022, 13:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ತಹಶೀಲ್ದಾರರ ವಾಹನ  ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಕೊನೆಗೂ 8 ಲಕ್ಷ ರೂ. ಪರಿಹಾರ ಪ್ರಕಟಿಸಿದೆ .

ಅಕ್ರಮ ಸಕ್ರಮ ಸಾಗುವಳಿ ಪತ್ರ ನೀಡಿಕೆ ಹಗರಣದಲ್ಲಿ ಒತ್ತಡ -ಮಾನಸಿಕ ಆಘಾತ- ಕಿರುಕುಳಕ್ಕೆ ಬೇಸತ್ತು ಜೀಪ್ ಚಾಲಕ ಈ  ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಹೆಗ್ತೂರು ವಿಜೇತ್ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ.

ಶವವನ್ನು ಮರಣೋತ್ತರ ಪರೀಕ್ಷೆಗೆ ತಂದ ಸಂದರ್ಭದಲ್ಲಿ  ಶೃಂಗೇರಿಯ ಮುಖ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಾಗರಿಕರು ಸ್ಥಳಕ್ಕೆ ಅಧಿಕಾರಿಗಳು ಬರಲು  ವಿಳಂಬ ಮಾಡಿದ ಕ್ರಮ ಆಕ್ಷೇಪಿಸಿ ತರಾಟೆಗೆ ತೆಗೆದುಕೊಂಡರು ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದರು .

ಶವದ ಮರಣೋತ್ತರ ಪರೀಕ್ಷೆ ಬಳಿಕ ರಸ್ತೆ ಮಧ್ಯೆ ಶವವನ್ನು ಇಟ್ಟು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು .

ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಉಪವಿಭಾಗಾಧಿಕಾರಿ ನಾಗರಾಜ್ ,ಪ್ರತಿಭಟನಾನಿರತರ ಮನವೊಲಿಸಿ 8 ಲಕ್ಷ ರೂ ಪರಿಹಾರ ಪ್ರಕಟಿಸಿದೆ ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು .

ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಟ್ಟು ಸ್ವಗ್ರಾಮಕ್ಕೆ ಪಾರ್ಥಿವ ಶರೀರರವನ್ನು ತೆಗೆದುಕೊಂಡು ಹೋಗಲಾಯಿತು .

ಈ ನಡುವೆ ಡೆತ್ ನೋಟ್ ಆಧರಿಸಿ ಕಛೇರಿಯಲ್ಲಿ ಪ್ರಥಮ ದರ್ಜೆ ಗುಮಾಸ್ತ  ಶರತ್ ಹಾಗೂ  ಶಿರಸ್ತೆದಾರ್ ರಾಘವೇಂದ್ರ ಹಾಗೂ ನಾಗೇಂದ್ರರನ್ನು ವಶಕ್ಕೆ ಪಡೆದು ಪೋಲಿಸರು  ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ತಹಸೀಲ್ದಾರ್ ಅಂಬುಜಾ ಎಸಿಬಿ ಬಲೆಗೆ ಬಿದ್ದು ಅಮಾನತು ನಿರೀಕ್ಷೆಯಲ್ಲಿದ್ದಾರೆ . ಎಸಿಬಿ ಬಲೆಗೆ ಬಿದ್ದಿದ್ದ ಸಿದ್ಧಪ್ಪ ನನ್ನು ಅಮಾನತು ಮಾಡಿದ ಜಿಲ್ಲಾಡಳಿತ ನಂತರದ ದಿನಗಳಲ್ಲಿ ಅಕ್ರಮ ಸಕ್ರಮ ಸಾಗುವಳಿ ಚೀಟಿ ಹಗರಣ ಸಂಬಂಧ  ಸತೀಶ್ , ಶಿವಕುಮಾರ್ ,ಸಂದೀಪ್ ರನ್ನು ಅಮಾನತು ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು