7:10 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಪಕ್ಷ ಉಪನಾಯಕ ಯು.ಟಿ ಖಾದರ್

31/01/2022, 17:59

ಬಂಟ್ವಾಳ(Reporterkarnataka.com) ಕರ್ನಾಟಕ ವಿಧಾನ ಸಭೆಯ ಪತಿಪಕ್ಷದ ಉಪನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಅವರಿಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಪ್ರಮಾಣಿಕತೆಯಿಂದ ಕರ್ತವ್ಯ ನಿಭಾಯಿಸಿ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಗೌರವ ತರುವ ಕೆಲಸ ಮಾಡುತ್ತೇವೆ. ಈ ಜವಾಬ್ದಾರಿ ತನ್ನ ಕ್ಷೇತ್ರದ ಮತದಾರರಿಗೆ ಸಂದ ಗೌರವಾಗಿದೆ ಎಂದು ಹೇಳಿದರು.

ತನ್ನ ಆಯ್ಕೆಗೆ ಕಾರಣರಾದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿದಂತೆ ಎಲ್ಲಾ ಹಿರಿಯ-ಕಿರಿಯ ನಾಯಕರಿಗೆ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪಕ್ಷಕ್ಕೆ ನನ್ನಿಂದಾಗುವ ಸಹಕಾರ ನೀಡುತ್ತೇನೆ.

ತಾನು ವಿದ್ಯಾರ್ಥಿಯಾಗಿದ್ದಾಗ ಹಿರಿಯ ನಾಯಕ ಜನಾರ್ದನ ಪೂಜಾರಿಯವರು ತನ್ನನ್ನು ಮೊದಲ ಬಾರಿಗೆ ಎನ್‌ಎಸ್‌ಯುಐನ ಕಾರ್ಯದರ್ಶಿಯನ್ನಾಗಿ ಮಾಡಿದ್ದರು. ಹೀಗಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಜತೆಗೆ ಜಿಲ್ಲೆಯ ಎಲ್ಲಾ ಹಿರಿಯ-ಕಿರಿಯ ಮುಖಂಡರುಗಳ ಆಶೀರ್ವಾದವನ್ನು ಕೇಳುತ್ತಿದ್ದೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು