1:54 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತ: ಡಾ. ನಾಗರತ್ನ ಕೆ. ಎ .

01/02/2022, 00:01

ಮಂಗಳೂರು(reporterkarnataka.com): ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ ಹಾಗೂ ನಾಯಕತ್ವದ ಗುಣಗಳು ಜನ್ಮದತ್ತವಾಗಿ ಬಂದಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಹೇಳಿದರು.

ಅವರು ನಗರದ ಬೆಸೆಂಟ್  ಮಹಿಳಾ  ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವ ಶಕ್ತಿಗಳಿಗೆ ಪ್ರೇರಣೆ.  ಯುವಕರಲ್ಲಿ ಹಿಂದೆಯೂ ಸಮಸ್ಯೆಗಳಿದ್ದವು ಈಗಲೂ ಸಮಸ್ಯೆಗಳಿವೆ . ಆದ್ದರಿಂದ ಸಮಸ್ಯೆಗಳಿಂದ ದೂರ ಸರಿಯದೆ ತಮ್ಮೊಳಗಿನ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ವಾಮಿವಿವೇಕಾನಂದರ ತತ್ವ-ಆದರ್ಶ ಗಳನ್ನು ಪಾಲಿಸಿ, ಅದರಿಂದ ರಾಷ್ಟ್ರೀಯತೆ,ಮಾನವೀಯ ಸಂಬಂಧಗಳು ಉತ್ತಮವಾಗಿ ಬೆಳೆಯಲು ಸಹಕಾರಿ ಎಂದುರಾ. ಸೇ. ಯೋ. ಸ್ವಯಂ ಸೇವಕಿಯರಿಗೆ ಕಿವಿ ಮಾತು ಹೇಳಿದರು.


ವಿದ್ಯಾರ್ಥಿನಿಯರಲ್ಲಿ ಸಮಯಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತವಾಗಿ ಇರುತ್ತದೆ, ಎಂದರು.

ಬೆಸೆಂಟ್ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಿಂಪತಿ ಗಿಟ್ಟಿಸಿಕೊಳ್ಳಲು ಸೇವೆ ಮಾಡಬೇಡಿ. ಅದರಿಂದ ಏನೂ ಪ್ರಯೋಜನವಿಲ್ಲ. ನಿಷ್ಕಲ್ಮಶ ಸೇವೆ ಮಾಡಿ ಅದರಲ್ಲಿರುವ ಕಷ್ಟ-ಸುಖಗಳನ್ನು ಅನುಭವಿಸಿದಾಗ ಮಾತ್ರ ಜೀವನ ಏನು ಎಂಬುದು ಅರಿವಾಗುತ್ತದೆ.





ರಾ.ಸೆ.ಯೋ ಯೋಜನಾಧಿಕಾರಿ  ರವಿಪ್ರಭಾ,  ರಾ. ಸೇ. ಯೋ ಕಾರ್ಯದರ್ಶಿಗಳಾದ ಸ್ಮಿತಾ, ಪೂಜಾ,ಉಪನ್ಯಾಸಕರಾದ ಡಾ. ಸತೀಶ್.ಕೆ ಅರುಣ್, ರಕ್ಷಿತ್, ಸ್ವಾತಿ, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು