1:37 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೇಂದ್ರ ಬಜೆಟ್ 2022 ಮುಖ್ಯಾಂಶಗಳು: ಯಾವುದು ಅಗ್ಗ? ಯಾವುದು ದುಬಾರಿ?

01/02/2022, 21:46

ಹೊಸದಿಲ್ಲಿ(reporterkarnataka.com): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರೀಯ ಬಜೆಟ್ ನಲ್ಲಿ ಯಾವುದು ಅಗ್ಗ ಯಾವುದು ತುಟ್ಟಿ ಯಾಗಿರಲಿದೆ ಇಲ್ಲಿ ನೋಡಿ

ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವರು ಪ್ರಸ್ತಾಪಿಸಿದಂತೆ, ಮೊಬೈಲ್ ಫೋನ್‌ಗಳು ಮತ್ತು ಮೊಬೈಲ್ ಫೋನ್ ಚಾರ್ಜರ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾನ್ಯವಾಗಿ ಬಳಸುವ ವಸ್ತುಗಳು ಅಗ್ಗವಾಗಲಿವೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು ಹಾಗೂ ರತ್ನದ ಕಲ್ಲುಗಳ ಮೇಲಿನ ಸೀಮಾ ಸುಂಕವನ್ನು ಶೇ 5ಕ್ಕೆ ಇಳಿಸಲಾಗಿದೆ. ಆ ನಂತರದಲ್ಲಿ 350ಕ್ಕೂ ಹೆಚ್ಚು ಸೀಮಾ ಸುಂಕ ವಿನಾಯಿತಿಗಳನ್ನು ಹಂತಹಂತವಾಗಿ ತೆಗೆದುಹಾಕಲು ಪ್ರಸ್ತಾಪಿಸಲಾಗಿದೆ.

ಯಾವುದು ಅಗ್ಗ?

*ಬಟ್ಟೆ

*ಎಲೆಕ್ಟ್ರಾನಿಕ್ ವಸ್ತುಗಳು

*ಆಭರಣ ವಸ್ತುಗಳು

* ಕೈಗಡಿಯಾರಗಳು

*ಚರ್ಮದ ವಸ್ತುಗಳು

*ಕೃಷಿ ಉಪಕರಣಗಳು

*ರತ್ನದ ಕಲ್ಲುಗಳು ಮತ್ತು ವಜ್ರಗಳು

* ತದ್ರೂಪಿ ಅಥವಾ ಅನುಕರಣೆ ಆಭರಣ

*ಮೊಬೈಲ್ ಫೋನ್‌ಗಳು

*ಮೊಬೈಲ್ ಫೋನ್ ಚಾರ್ಜರ್‌ಗಳು

*ಪೆಟ್ರೋಲಿಯಂ ಉತ್ಪನ್ನಗಳಿಗೆ ಅಗತ್ಯವಿರುವ ರಾಸಾಯನಿಕಗಳು

*ಮೆಥನಾಲ್ ಸೇರಿದಂತೆ ಕೆಲವು ರಾಸಾಯನಿಕಗಳು ಮೇಲಿನ ಕಸ್ಟಮ್ ಸುಂಕಗಳು

*ಸ್ಟೀಲ್ ಸ್ಕ್ರ್ಯಾಪ್

ಯಾವುದು ದುಬಾರಿ?

*ಎಲ್ಲ ಆಮದು ವಸ್ತುಗಳು

*ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆ

*ಛತ್ರಿಗಳ ಮೇಲಿನ ಸುಂಕ ಹೆಚ್ಚಳ…

 ಬಜೆಟ್ ಭಾಷಣದ ಮುಖ್ಯಾಂಶಗಳು :

* ಲಸಿಕೆ ಹಾಕುವಲ್ಲಿನ ವೇಗವು ಆರ್ಥಿಕ ಚೇತರಿಕೆಗೆ ನೆರವಾಗಿದೆ.

* ದೇಶ ಈಗ ಓಮಿಕ್ರಾನ್ ಅಲೆಯ ನಡುವೆ ಇದೆ.

* 2021-22ರಲ್ಲಿ ಆರ್ಥಿಕತೆಯಲ್ಲಿ ಕ್ಷಿಪ್ರ ಹಿನ್ನಡೆ ಉಂಟಾಯಿತು. ಶೇ.9.2ರ ಬೆಳವಣಿಗೆ ನಿರೀಕ್ಷಿಸಲಾಗಿತ್ತು.

* ಸರ್ಕಾರವು 2014ರಿಂದ ಬಡ ಮತ್ತು ಅವಕಾಶವಂಚಿತ ಜನರಿಗೆ ಆದ್ಯತೆ ನೀಡಿದೆ. ಸರ್ಕಾರವು ಮಧ್ಯಮ ವರ್ಗಕ್ಕೆ ಅಗತ್ಯ ಪರಿಸರ ವ್ಯವಸ್ಥೆಯನ್ನು ಒದಗಿಸಲು ಶ್ರಮಿಸುತ್ತಿದೆ.

* ವಿದೇಶೀ ಬಂಡವಾಳ ಮತ್ತು ಖಾಸಗಿ ಬಂಡವಾಳ ಹೂಡಿಕೆಯಲ್ಲಿನ ಹೆಚ್ಚಳದಿಂದ ಹೂಡಿಕೆಯ ಪ್ರಮಾಣ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ.

* ಏರ್ ಇಂಡಿಯಾದ ಮಾಲೀಕತ್ವದ ಕಾರ್ಯತಂತ್ರ ವರ್ಗಾವಣೆ ಪೂರ್ಣಗೊಂಡಿದೆ. ಎನ್‍ಐಎನ್‍ಎಲ್‍ನ ಕಾರ್ಯತಂತ್ರ ಖರೀದಿದಾರರನ್ನು ಆಯ್ಕೆ ಮಾಡಲಾಗಿದೆ.

* ಎನ್‍ಆರ್‍ಸಿಎಲ್ ತನ್ನ ಚಟುವಟಿಕೆಯನ್ನು ಆರಂಭಿಸಿದೆ.

* ಉತ್ಪಾದಕತೆ ಸಂಪರ್ಕಿತ ಯೋಜನೆಗಳು 14 ಕ್ಷೇತ್ರಗಳಲ್ಲಿ ಅದ್ಭುತ ಪ್ರತಿಕ್ರಿಯೆ ಪಡೆದಿದೆ. ಸ್ವೀಕರಿಸುವ ಹೂಡಿಕೆ ಅಂದಾಜು 30 ಲಕ್ಷ ಕೊಟಿ ರೂ.ಗಳಷ್ಟು ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು