3:13 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

01/02/2022, 21:58

ಮಂಗಳೂರು(reporterkarnataka.com): ಕೋವಿಡ್ 19ರ ಮಹಾಮಾರಿಯಿಂದ ಜನರು ತತ್ತರಿಸಿ ಹೋದ ಈ ಸಂದರ್ಭದಲ್ಲಿ ರಕ್ತದಾನದಂತಹ ಮಹತ್ಕಾರ್ಯವನ್ನು ಕೈಗೊಂಡು ನೂರಾರು ಜನರ ಬಾಳಿಗೆ ಆಶಾದೀಪವಾಗಿರುವ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ನಗರಪಾಲಿಕೆಯ ಕಾರ್ಪೊರೇಟರ್ ಹಾಗೂ ಲೆಕ್ಕ ಪತ್ರ ಸ್ಥಾಯೀ ಸಮಿತಿ ಅಧ್ಯಕ್ಷ ಲೀಲಾವತಿ ಪ್ರಕಾಶ್ ಹೇಳಿದರು. 

ಅವರು ಬೆಸೆಂಟ್ ಸಂಧ್ಯಾ ಹಳೆ ವಿದ್ಯಾರ್ಥಿ ಸಂಘ (ರಿ) ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆ ಅಂಬೇಡ್ಕರ್ ವೃತ್ತ ಮಂಗಳೂರು ಇದರ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ಬೆಸಂಟ್ ಸಂಧ್ಯಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಸಂಚಾಲಕ ಗಣೇಶ ಕೃಷ್ಣ ಭಟ್ ಹಾಗೂ ಪ್ರಾಂಶುಪಾಲ ಡಾ. ಲಕ್ಷ್ಮಿ ನಾರಾಯಣ ಭಟ್ ಅವರು ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಹಳೆ ವಿದ್ಯಾರ್ಥಿ ಪ್ರದೀಪ್ ಸ್ವಾಗತಿಸಿದರು. ಡಾ. ಸೌಮ್ಯ ಗುಪ್ತ ರಕ್ತದಾನದ ಮಹತ್ವ ಮತ್ತು ರಕ್ತದಾನಕ್ಕೆ ಯಾರು ಅರ್ಹರು ಎಂಬ ಬಗ್ಗೆ ವಿವರಿಸಿದರು.  

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮೊದಲಿಯಾರ್,  ಸಲಹೆಗಾರ ಶ್ರೀ ಗಣಪತಿ ಭಟ್ ಎಂ. ಉಪಸ್ಥಿತರಿದ್ದರು. ಪದ್ಮಜ ಪ್ರಾರ್ಥಿಸಿದರು. ಕಾರ್ಯದರ್ಶಿ ರಾಜೇಶ್ ಮೊದಲಿಯಾರ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು