11:33 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

01/02/2022, 21:58

ಮಂಗಳೂರು(reporterkarnataka.com): ಕೋವಿಡ್ 19ರ ಮಹಾಮಾರಿಯಿಂದ ಜನರು ತತ್ತರಿಸಿ ಹೋದ ಈ ಸಂದರ್ಭದಲ್ಲಿ ರಕ್ತದಾನದಂತಹ ಮಹತ್ಕಾರ್ಯವನ್ನು ಕೈಗೊಂಡು ನೂರಾರು ಜನರ ಬಾಳಿಗೆ ಆಶಾದೀಪವಾಗಿರುವ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ನಗರಪಾಲಿಕೆಯ ಕಾರ್ಪೊರೇಟರ್ ಹಾಗೂ ಲೆಕ್ಕ ಪತ್ರ ಸ್ಥಾಯೀ ಸಮಿತಿ ಅಧ್ಯಕ್ಷ ಲೀಲಾವತಿ ಪ್ರಕಾಶ್ ಹೇಳಿದರು. 

ಅವರು ಬೆಸೆಂಟ್ ಸಂಧ್ಯಾ ಹಳೆ ವಿದ್ಯಾರ್ಥಿ ಸಂಘ (ರಿ) ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆ ಅಂಬೇಡ್ಕರ್ ವೃತ್ತ ಮಂಗಳೂರು ಇದರ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ಬೆಸಂಟ್ ಸಂಧ್ಯಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಸಂಚಾಲಕ ಗಣೇಶ ಕೃಷ್ಣ ಭಟ್ ಹಾಗೂ ಪ್ರಾಂಶುಪಾಲ ಡಾ. ಲಕ್ಷ್ಮಿ ನಾರಾಯಣ ಭಟ್ ಅವರು ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಹಳೆ ವಿದ್ಯಾರ್ಥಿ ಪ್ರದೀಪ್ ಸ್ವಾಗತಿಸಿದರು. ಡಾ. ಸೌಮ್ಯ ಗುಪ್ತ ರಕ್ತದಾನದ ಮಹತ್ವ ಮತ್ತು ರಕ್ತದಾನಕ್ಕೆ ಯಾರು ಅರ್ಹರು ಎಂಬ ಬಗ್ಗೆ ವಿವರಿಸಿದರು.  

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮೊದಲಿಯಾರ್,  ಸಲಹೆಗಾರ ಶ್ರೀ ಗಣಪತಿ ಭಟ್ ಎಂ. ಉಪಸ್ಥಿತರಿದ್ದರು. ಪದ್ಮಜ ಪ್ರಾರ್ಥಿಸಿದರು. ಕಾರ್ಯದರ್ಶಿ ರಾಜೇಶ್ ಮೊದಲಿಯಾರ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು