12:25 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಫೆ. 7ರಂದು ಮಂಗಳೂರು ರಥೋತ್ಸವ: ಪೂರ್ವಭಾವಿ ನೂತನ ಬ್ರಹ್ಮರಥ ಸಮರ್ಪಣೆ

02/02/2022, 18:23

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಇತಿಹಾಸ ಪ್ರಸಿದ್ಧ ” ಮಂಗಳೂರು ರಥೋತ್ಸವ ” ಫೆಬ್ರವರಿ 7ರಂದು ನಡೆಯಲಿದ್ದು, ಇದರ ಪೂರ್ವಾಂಗ ಈ ಬಾರಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮರಥವನ್ನು ಇಂದು ಸಮರ್ಪಿಸಲಾಯಿತು.


ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬುಧವಾರ ಪೂರ್ವಾಹ್ನ 12:44 ರ ಅಭಿಜಿನ್ ಮುಹೂರ್ತದಲ್ಲಿ ರಥ ಸಮರ್ಪಣೆ ನೆರವೇರಿತು. ಬೆಳಿಗ್ಗೆ ಶ್ರೀ ದೇವರ ಸನ್ನಿಧಾನದಲ್ಲಿ ಮಹಾ ಪ್ರಾರ್ಥನೆ ತದನಂತರ ವಿದ್ವತ್ ವೈದಿಕರಿಂದ ಯಾಗ ಶಾಲೆಯಲ್ಲಿ ರಥ ಸಮರ್ಪಣಾ ಯಜ್ಞ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ 11:30ಕ್ಕೆ ಯಜ್ಞ ಮಹಾ ಪೂರ್ಣಾಹುತಿ ನೆರವೇರಿತು. ಬಳಿಕ ಪ್ರಧಾನ ವೀರ ವೆಂಕಟೇಶ ಮತ್ತು ಉತ್ಸವ ಶ್ರೀನಿವಾಸ ದೇವರ ರಥಾರೋಹಣ ನಡೆಯಿತು.

ಇದೇ ಸಂದರ್ಭದಲ್ಲಿ ನೂತನ ರಥ ಸಮರ್ಪಣೆ ಗೆ ಸೇವೆ ಸಲ್ಲಿಸಿದ ಮಹನೀಯರಿಗೆ ಶ್ರೀಗಳವರ ದಿವ್ಯ ಹಸ್ತಗಳಿಂದ ಗಂಧ ಪ್ರಸಾದ ನೀಡಲಾಯಿತು. ರಾತ್ರಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀಗಳವರ ಉಪಸ್ಥಿತಿಯಲ್ಲಿ ಸ್ವರ್ಣ ಗರುಡವಾಹನ ಸೇವೆ ನಡೆಯಿತು. ದೇವಳ ದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು