1:22 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕ ಪದಗ್ರಹ: ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷ

03/02/2022, 09:08

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. 

ಜೇಸಿ ಮಂಗಳೂರು ಇಂಪ್ಯಾಕ್ಟ್‌ ಪ್ರವರ್ತಿತ ಜೆಸಿಐ ಬಿ.ಸಿ. ರೋಡ್ ಪವರ್ ಸ್ಟಾರ್ ಗೆ ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷರಾಗಿ, ಸುಧೀರ್ ಕುಮಾರ್ ಶೆಟ್ಟಿ ಕಾರ್ಯದರ್ಶಿಯಾಗಿ, ಮರೀಟಾ ಕ್ರಿಸ್ಟೀನ್ ಡಿ. ಜತೆ ಕಾರ್ಯದರ್ಶಿಯಾಗಿ,  ಸುಭಾಶ್  ರೈ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು.

ಉಪಾಧ್ಯಕ್ಷರಾಗಿ ಮಹೇಶ್ ಶೆಟ್ಟಿ, ಅಶ್ರಫ್ ಎಂ.ಬಿ, ಸತೀಶ್ ಸಂಪಾಜೆ, ಸುನಿಲ್ ಮುಡ್ಡಾಜೆ ರಾಯಿ, ಸುರೇಶ್ ಮರೋಳಿ, ಪ್ರಥಮ ಮಹಿಳೆಯಾಗಿ ಪುನೀತಾ ಎಸ್., ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕನಿಷ್ಕ್ ಎಸ್. ರೈ, ನಿರ್ದೇಶಕರು ಮತ್ತು ಘಟಕದ ವಿವಿಧ ಜವಾಬ್ದಾರಿಗಳನ್ನು ಅರ್ಜುನ್ ಆಳ್ವ, ಅನುಪಮಾ ಎಸ್. ಕಡಬ, ರವಿರಾಜ್ ಶೆಟ್ಟಿ ಪಾಲ್ತಾಜೆ, ಸುಹಾಸ್ ಕೆ. ಕಲ್ಲಡ್ಕ, ದೀಪಕ್ ರೈ ದೇರಳಕಟ್ಟೆ, ರೋಹಿತ್ ರಾಯಿ, ನಾಗರಾಜ್ ಶೆಟ್ಟಿ ಮೊಡಂಕಾಪು, ಶರತ್ ಕಲ್ಲಡ್ಕ, ವಿದ್ಯಾ ಎಸ್. ರೈ, ಭವ್ಯಾ ಸುಧೀರ್ ಶೆಟ್ಟಿ, ಬೇಬಿ ಸತೀಶ್ ಅವರಿಗೆ ನಿಯೋಜಿಸಲಾಯಿತು.

ಬಿ.ಸಿ.ರೋಡ್‌ನ ವಕೀಲ ಕಾರ್ತಿಕ್ ಎಂ . ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯರಾದ ಡಾ.ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಗೌರವ ಅತಿಥಿಗಳಾಗಿದ್ದರು. ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ಪ್ರಾಜೆಕ್ಟ್ ಡೈರೆಕ್ಟರ್ ಬಿ.ಡಿ.ದತ್ತಾತ್ತೇಯ, ಜೆಸಿಐ ಮಂಗಳೂರು ಇಂಪ್ಯಾಕ್ಟ್ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ್ ಎ.ಪಿ. ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರ ಚೇತನಾ ದತ್ತಾತ್ರೇಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು