5:59 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಂಗಳೂರು: ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ; ಚಾಲಕ ಸಾವು

03/02/2022, 15:16

ಮಂಗಳೂರು:(reporterkarnatak ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್‌ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ.

ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.


ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.

ಇಸ್ಮಾಯಿಲ್ ನಿನ್ನೆ ತನ್ನ ಟೂರಿಸ್ಟ್ ಕಾರನ್ನು ಮಧ್ಯಾಹ್ನ ಮಂಗಳಾದೇವಿ ಮಂಕಿಸ್ಟಾಂಡ್ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಹೃದಯಘಾತವಾಗಿದೆ.

ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಟೆಂಪೋ ಟ್ರಾವೆಲರ್‌ನ ಹಿಂಭಾಗದ ಎಡಬದಿಗೆ ಢಿಕ್ಕಿ ಹೊಡೆಯಿತು.

ಟೆಂಪೋಟ್ರಾವೆಲರ್ ಮುಂದೆ ನಿಂತಿದ್ದ ಬೈಕ್ ಅಪ್ಪಚ್ಚಿಯಾಗಿದೆ. ಅಪಘಾತದ ರಭಸಕ್ಕೆ ಇಸ್ಮಾಯೀಲ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸಾರ್ವಜನಿಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಆದರೆ ದಾರಿಮಧ್ಯೆಯೇ ಇಸ್ಮಾಯಿಲ್ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿರುವ ಸಂಚಾರ ಪೂರ್ವ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು