7:46 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ; ಚಾಲಕ ಸಾವು

03/02/2022, 15:16

ಮಂಗಳೂರು:(reporterkarnatak ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್‌ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ.

ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.


ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.

ಇಸ್ಮಾಯಿಲ್ ನಿನ್ನೆ ತನ್ನ ಟೂರಿಸ್ಟ್ ಕಾರನ್ನು ಮಧ್ಯಾಹ್ನ ಮಂಗಳಾದೇವಿ ಮಂಕಿಸ್ಟಾಂಡ್ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಹೃದಯಘಾತವಾಗಿದೆ.

ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಟೆಂಪೋ ಟ್ರಾವೆಲರ್‌ನ ಹಿಂಭಾಗದ ಎಡಬದಿಗೆ ಢಿಕ್ಕಿ ಹೊಡೆಯಿತು.

ಟೆಂಪೋಟ್ರಾವೆಲರ್ ಮುಂದೆ ನಿಂತಿದ್ದ ಬೈಕ್ ಅಪ್ಪಚ್ಚಿಯಾಗಿದೆ. ಅಪಘಾತದ ರಭಸಕ್ಕೆ ಇಸ್ಮಾಯೀಲ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸಾರ್ವಜನಿಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಆದರೆ ದಾರಿಮಧ್ಯೆಯೇ ಇಸ್ಮಾಯಿಲ್ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿರುವ ಸಂಚಾರ ಪೂರ್ವ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು