7:29 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ನಂಜನಗೂಡು: ಕಣ್ಣೆದುರಿನಲ್ಲೇ ಸಾಕಿದ ಎರಡು ಹಸುಗಳನ್ನು ಎಳೆದೊಯ್ದ ವ್ಯಾಘ್ರ; ಕಣ್ಣೀರಿಟ್ಟ ದಂಪತಿ

03/02/2022, 22:01

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ನಡೆದಿದೆ.

ಪಾಪಣ್ಣ ಮತ್ತು ಸಾಕಮ್ಮ ಎಂಬ ದಂಪತಿಗೆ ಸೇರಿದ ಬೆಲೆಬಾಳುವ ಹಸುಗಳಳ ಮೇಲೆ ಬಂಡೀಪುರ ರಾಷ್ಟ್ರೀಯ.ಉದ್ಯಾನದಿಂದ ಬಂದಿದ್ದ ಹುಲಿ ದಾಳಿ ನಡೆಸಿದೆ. ಹಸುಗಳನ್ನು ರಕ್ಷಿಸಲು ದಂಪತಿ ಮಾಡಿದ ಪ್ರಯತ್ನ ವಿಫಲವಾಗಿದೆ. ಕಣ್ಣ ಮುಂದೆಯೇ ಸಾಕಿದ್ದ ಹಸುಗಳನ್ನು ಹುಲಿ ಎಳೆದೊಯ್ದುನ್ನು ನೋಡಿ ಕಣ್ಣೀರು ಹಾಕಿದರು.

ಕುಟುಂಬ ನಿರ್ವಹಣೆಗೆ ಆಸರೆಯಾಗಿದ್ದ ಹಸುಗಳನ್ನ ಕಣ್ಣಮುಂದೆಯೇ ಬಲಿ ಪಡೆದ ಹುಲಿಯನ್ನ ಸೆರೆಹಿಡಿಯುವಂತೆ ಆಗ್ರಹಿಸಿ, ತಮಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿಯ ಮುಂದೆ ಆತ್ಮಹತ್ಯೆಗೆ ಮುಂದಾಗುವುದಾಗಿ ನೊಂದ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಇದುವರೆಗೂ ಅರಣ್ಯ ಇಲಾಖಾಧಿಕಾರಿಗಳು ಆಗಮಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು