5:38 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ: ಕೊರೊನಾ ವಾರಿಯರ್ಸ್ ಗೆ ಗೌರವಾರ್ಪಣೆ

06/06/2021, 14:43

ಮಂಗಳೂರು( reporterkaranatakanews: ರಾಷ್ಟ್ರೀಯ  ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ ಜರುಗಿತು.


‘ಉಸಿರು ಹಸಿರು’ ಎನ್ನುವ ಭಾವದಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಆರೋಗ್ಯ ಕೇಂದ್ರದ  ವೈದ್ಯಾಧಿಕಾರಿ ಡಾ.ದಿನೇಶ್ ಚಾಲನೆ ನೀಡಿದರು. ಅವರು ಮಾತನಾಡಿ ಆಮ್ಲಜನಕ ಕೊರತೆ ಎದುರಿಸುತ್ತಿರುವ ಈ ಸಮಯದಲ್ಲಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂದರು.

ತೋಟಗಾರಿಕೆ ಇಲಾಖೆಯ ನಿರ್ದೇಶಕ ಪ್ರವೀಣ್ ಮಾತನಾಡಿ, ಕೊರೊನಾ ಸೋಂಕಿತರ ಮನಸ್ಥೈರ್ಯ ಹೆಚ್ಚಿಸುವ ಕೆಲಸ ಆಗಬೇಕಿದೆ.
ಪರಿಸರ ಜಾಗೃತಿ ಮೂಡಿಸುವಲ್ಲಿ ಇಂತಹ ದಿನಾಚರಣೆಗಳು ಮಹತ್ವಪೂರ್ಣ ಎಂದರು.
ಕ್ರೀಡಾ ಇಲಾಖೆಯ ನಿರ್ದೇಶಕರಾದ ಪ್ರದೀಪ್ ಡಿಸೋಜ ಮಾತನಾಡಿ, ಪರಿಸರ ಸ್ವಚ್ಛತೆ ಸಾಮಾಜಿಕ ಜವಾಬ್ದಾರಿ ಎಂದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ ಹಾಗೂ ರೂಪಶ್ರೀ ಪೂಜಾರಿ  ಉಪಸ್ಥಿತರಿದ್ದರು.

ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ. ಮಾತನಾಡಿ, ಕೊರೊನಾ ಯೋಧರಾಗಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಎಲ್ಲಾ ಸಿಬ್ಬಂದಿಗಳ ಜೊತೆಗೂಡಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವುದು ಒಂದು ಮಹತ್ವದ ಕಾರ್ಯಕ್ರಮ ಹಾಗೂ ಜೀವನಕ್ಕೆ ಜೀವ ತುಂಬುವ   ಈ ಕೆಲಸ ಪ್ರಾಣವಾಯು ಇದ್ದಂತೆ ಎಂದರು. 


ದ.ಕ ಜಿಲ್ಲೆಯ ಕೋವಿಡ್  ನೋಡಲ್ ಅಧಿಕಾರಿ ಡಾ. ಸೇಸಪ್ಪ ಅಮೀನ್ ನಿರೂಪಿಸಿದರು. 

ಕಾರ್ಮೆಲ್ ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಮಧುರ ಭಾಗವಹಿಸಿದ್ದರು. 

ಈ  ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಪುಷ್ಪ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು