9:35 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ: ಕೊರೊನಾ ವಾರಿಯರ್ಸ್ ಗೆ ಗೌರವಾರ್ಪಣೆ

06/06/2021, 14:43

ಮಂಗಳೂರು( reporterkaranatakanews: ರಾಷ್ಟ್ರೀಯ  ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ ಜರುಗಿತು.


‘ಉಸಿರು ಹಸಿರು’ ಎನ್ನುವ ಭಾವದಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಆರೋಗ್ಯ ಕೇಂದ್ರದ  ವೈದ್ಯಾಧಿಕಾರಿ ಡಾ.ದಿನೇಶ್ ಚಾಲನೆ ನೀಡಿದರು. ಅವರು ಮಾತನಾಡಿ ಆಮ್ಲಜನಕ ಕೊರತೆ ಎದುರಿಸುತ್ತಿರುವ ಈ ಸಮಯದಲ್ಲಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂದರು.

ತೋಟಗಾರಿಕೆ ಇಲಾಖೆಯ ನಿರ್ದೇಶಕ ಪ್ರವೀಣ್ ಮಾತನಾಡಿ, ಕೊರೊನಾ ಸೋಂಕಿತರ ಮನಸ್ಥೈರ್ಯ ಹೆಚ್ಚಿಸುವ ಕೆಲಸ ಆಗಬೇಕಿದೆ.
ಪರಿಸರ ಜಾಗೃತಿ ಮೂಡಿಸುವಲ್ಲಿ ಇಂತಹ ದಿನಾಚರಣೆಗಳು ಮಹತ್ವಪೂರ್ಣ ಎಂದರು.
ಕ್ರೀಡಾ ಇಲಾಖೆಯ ನಿರ್ದೇಶಕರಾದ ಪ್ರದೀಪ್ ಡಿಸೋಜ ಮಾತನಾಡಿ, ಪರಿಸರ ಸ್ವಚ್ಛತೆ ಸಾಮಾಜಿಕ ಜವಾಬ್ದಾರಿ ಎಂದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ ಹಾಗೂ ರೂಪಶ್ರೀ ಪೂಜಾರಿ  ಉಪಸ್ಥಿತರಿದ್ದರು.

ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ. ಮಾತನಾಡಿ, ಕೊರೊನಾ ಯೋಧರಾಗಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಎಲ್ಲಾ ಸಿಬ್ಬಂದಿಗಳ ಜೊತೆಗೂಡಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವುದು ಒಂದು ಮಹತ್ವದ ಕಾರ್ಯಕ್ರಮ ಹಾಗೂ ಜೀವನಕ್ಕೆ ಜೀವ ತುಂಬುವ   ಈ ಕೆಲಸ ಪ್ರಾಣವಾಯು ಇದ್ದಂತೆ ಎಂದರು. 


ದ.ಕ ಜಿಲ್ಲೆಯ ಕೋವಿಡ್  ನೋಡಲ್ ಅಧಿಕಾರಿ ಡಾ. ಸೇಸಪ್ಪ ಅಮೀನ್ ನಿರೂಪಿಸಿದರು. 

ಕಾರ್ಮೆಲ್ ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಮಧುರ ಭಾಗವಹಿಸಿದ್ದರು. 

ಈ  ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಪುಷ್ಪ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು