8:32 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’:  ಎಸ್ ಡಿಎಂಸಿ ನಿರ್ಧಾರ

05/02/2022, 18:35

ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಬ್ಯಾನ್ ಹಾಕಲು ತೀರ್ಮಾನಿಸಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ ಧಾರ್ಮಿಕತೆಗೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ತರಗತಿಗೆ ಯಾರೂ ಬರುವಂತಿಲ್ಲ. ಸೋಮವಾರದಿಂದ ಕಾಲೇಜಿನ ನಿಯಮ ಪಾಲಿಸಿ ಕಾಲೇಜಿಗೆ ಬರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲೇಜು ಗೇಟ್ ತನಕ ಯಾವುದೇ ವಸ್ತ್ರ ಧರಿಸಿ ಬರಬಹುದು ಆದರೆ ತರಗತಿಗೆ ಪ್ರವೇಶಿಸುವಾಗ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೋಹನದಾಸ ಶೆಣೈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು