6:38 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’:  ಎಸ್ ಡಿಎಂಸಿ ನಿರ್ಧಾರ

05/02/2022, 18:35

ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಬ್ಯಾನ್ ಹಾಕಲು ತೀರ್ಮಾನಿಸಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ ಧಾರ್ಮಿಕತೆಗೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ತರಗತಿಗೆ ಯಾರೂ ಬರುವಂತಿಲ್ಲ. ಸೋಮವಾರದಿಂದ ಕಾಲೇಜಿನ ನಿಯಮ ಪಾಲಿಸಿ ಕಾಲೇಜಿಗೆ ಬರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲೇಜು ಗೇಟ್ ತನಕ ಯಾವುದೇ ವಸ್ತ್ರ ಧರಿಸಿ ಬರಬಹುದು ಆದರೆ ತರಗತಿಗೆ ಪ್ರವೇಶಿಸುವಾಗ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೋಹನದಾಸ ಶೆಣೈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು